AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಣ್ಣೆಯಿಂದ ಹೊಡೆದು ಮಗನಿಂದಲೇ ತಂದೆಯ ಹತ್ಯೆ, ಕಾಣೆಯಾಗಿದ್ದ ವಕೀಲ ಶವವಾಗಿ ಪತ್ತೆ

ಎರಡು ಪ್ರತ್ಯೇಕ ಘಟನೆ: ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲಿ ವೃತ್ತಿ‌ ಮಾಡುತ್ತಿದ್ದ ಗಿರೀಶ್​ ಕಾಡಣ್ಣವರ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ತುಮ್ಮರಮಟ್ಟಿ ಗ್ರಾಮದಲ್ಲಿ ಪತ್ತೆಯಾಗಿದೆ. ತಂದೆಗೆ ದೊಣ್ಣೆಯಿಂದ ಹೊಡೆದು, ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲದಲ್ಲಿ ನಡೆದಿದೆ.

ದೊಣ್ಣೆಯಿಂದ ಹೊಡೆದು ಮಗನಿಂದಲೇ ತಂದೆಯ ಹತ್ಯೆ, ಕಾಣೆಯಾಗಿದ್ದ ವಕೀಲ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Oct 19, 2023 | 7:44 AM

Share

ಬಾಗಲಕೋಟೆ ಅ.18: ಕಾಣೆಯಾಗಿದ್ದ ವಕೀಲರೊಬ್ಬರ (Lawyer) ಶವ ಕೊಲೆಯಾದ ಸ್ಥಿತಿಯಲ್ಲಿ ಬೀಳಗಿ (Bilagai) ತಾಲೂಕಿನ ತುಮ್ಮರಮಟ್ಟಿ ಗ್ರಾಮದಲ್ಲಿ ಪತ್ತೆಯಾಗಿದೆ. ಗಿರೀಶ್ ಕಾಡಣ್ಣವರ (38) ಕೊಲೆಯಾಗಿರುವ ವಕೀಲ. ದುಷ್ಕರ್ಮಿಗಳು ಕಲ್ಲಿನಿಂದ‌‌‌ ತಲೆ ಮತ್ತು ದೇಹವನ್ನು ಜಜ್ಜಿ‌ ಕೊಲೆ‌ ಮಾಡಿದ್ದಾರೆ. ಗ್ರಾಮದ ವಾರಿ ಮಲ್ಲಯ್ಯನ‌ ಗುಡಿ ಬೆಟ್ಟದ ಮೇಲೆ ಕೊಳೆತ‌ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಗಿರೀಶ್ ಕಾಡಣ್ಣವರ ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲಿ ವೃತ್ತಿ‌ ಮಾಡುತ್ತಿದ್ದರು. ಅಕ್ಟೋಬರ್ 15 ರಂದು ಮನೆಯಿಂದ‌ ನಾಪತ್ತೆಯಾಗಿದ್ದರು. ಸ್ಥಳಕ್ಕೆ ‌ಬೀಳಗಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಲೆ‌‌ ಮಾಡಿದ್ದು ಯಾರು, ಕೊಲೆ ಹಿಂದಿನ ಕಾರಣ ಏನು ಎಂಬುವುದರ ಕುರಿತು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಹಾರದ ವ್ಯಕ್ತಿಯ ಕೊಲೆ ಪ್ರಕರಣ: ಮೃತನ 2ನೇ ಪತ್ನಿ ಮತ್ತು ನಾದಿನಿ ಬಂಧನ

ದೊಣ್ಣೆಯಿಂದ ಹೊಡೆದು ಮಗನಿಂದಲೇ ತಂದೆಯ ಹತ್ಯೆ

ಕೊಡಗು: ದೊಣ್ಣೆಯಿಂದ ಹೊಡೆದು ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ನಾಂಗಲದಲ್ಲಿ ನಡೆದಿದೆ. ಚೇಂದ್ರಿಮಾಡರಾಜ (68) ಕೊಲೆಯಾದ ವ್ಯಕ್ತಿ. ಪುತ್ರ ದರ್ಶನ್ ಕೊಲೆ ಮಾಡಿದ ಆರೋಪಿ. ​ನಿನ್ನೆ (ಅ.18) ರಂದು ಪುತ್ರ ದರ್ಶನ್, ತಂದೆ ಚೇಂದ್ರಿಮಾಡರಾಜ ಅವರಿಗೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇಂದ್ರಿಮಾಡರಾಜನನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ದರ್ಶನ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More