AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯಿಂದ ಲಾರಿ ಚಾಲಕ ನಾಪತ್ತೆ ಪ್ರಕರಣ; ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಪೊಲೀಸ್ ಠಾಣೆಯಿಂದ ಲಾರಿ ಚಾಲಕ ನಾಪತ್ತೆ ಪ್ರಕರಣ; ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಮೃತ ಚಾಲಕ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jul 01, 2023 | 9:35 AM

Share

ಚಿತ್ರದುರ್ಗ: ಹೊಳಲ್ಕೆರೆ ಪೊಲೀಸ್ ಠಾಣೆ ಬಳಿಯಿಂದ ನಾಪತ್ತೆಯಾಗಿದ್ದ ಲಾರಿ ಚಾಲಕ ಬಸವಂತಕುಮಾರ್(37) ಸ್ಮಶಾನದ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ಬಸವಂತಕುಮಾರ್ ದಾವಣಗೆರೆ(Davanagere) ಜಿಲ್ಲೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ನಿವಾಸಿಯಾಗಿದ್ದು, ಜೂ.5ರಂದು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಇತನ ಲಾರಿಯನ್ನ ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿ ಠಾಣೆಗೆ ತಂದಿದ್ದರು. ಬಳಿಕ ದಂಡ ಕಟ್ಟಲು ಹಣವಿಲ್ಲದೆ ರಾತ್ರಿ ಲಾರಿಯಲ್ಲೇ ಮಲಗಿದ್ದ. ಇದಾದ ಮಾರನೇ ದಿನ ಬಸವಂತಕುಮಾರ್ ನಾಪತ್ತೆಯಾಗಿದ್ದ. ಈ ಬಗ್ಗೆ ಕುಟುಂಬಸ್ಥರು ಹೊಳಲ್ಕೆರೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೊಲೀಸ್​ ಠಾಣೆಯಿಂದ ನಾಪತ್ತೆಯಾಗಿದ್ದ ಬಸವಂತಕುಮಾರ್

ಜೂನ್ 5 ರಂದು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಲಾರಿಯನ್ನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಸಂಚಾರಿ ಠಾಣೆ ಪೊಲೀಸರು ಜಪ್ತಿ ಮಾಡಿದ್ದರು. ಹಣವಿಲ್ಲದ ಕಾರಣ ರಾತ್ರಿ ಲಾರಿಯಲ್ಲೇ ಮಲಗಿಕೊಂಡಿದ್ದ ಆತ. ಮುಂಜಾನೆ ಠಾಣೆ ಒಳಗಡೆ ಬಂದು, ಬಳಿಕ ನಾಪತ್ತೆಯಾಗಿದ್ದ. ಈ ಕುರಿತು ಆತನ ಸಂಬಂಧಿಕರು ಬಸವಂತಕುಮಾರ್ ಪತ್ತೆಗೆ ಆಗ್ರಹಿಸಿ ಹೊಳಲ್ಕೆರೆ ಠಾಣೆ ಪೊಲೀಸರ ವಿರುದ್ದ ಧರಣಿ ನಡೆಸಿದ್ದು, ಈ ಸಂಬಂಧ ದೂರು ಕೂಡ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಎಸ್ಪಿ ಕೆ.ಪರಶುರಾಮ್ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ:Belagavi News: ರಾತ್ರಿ ಗೆಳೆಯರ ಜೊತೆಗೆ ಹೋದವ, ಬೆಳಗ್ಗೆ ಶವವಾಗಿ ಪತ್ತೆ; ಮುಗಿಲು ಮುಟ್ಟಿದ ಮಗನನ್ನ ಕಳೆದುಕೊಂಡ ತಾಯಿಯ ಗೋಳಾಟ

ನಾಗರಹೊಳೆ ಅಭಯಾರಣ್ಯದಲ್ಲಿ ಹುಲಿ ಚಿರತೆ ಕಾದಾಟ ಚಿರತೆ ಸಾವು

ಮೈಸೂರು: ನಾಗರಹೊಳೆ ಅಭಯಾರಣ್ಯದ ದೊಡ್ಡಹಳ್ಳಿ ಬಳಿ ಚಿರತೆ ಶವ ಪತ್ತೆಯಾಗಿದ್ದು, ಹುಲಿ ಚಿರತೆ ಕಾದಾಟವಾಗಿ ಚಿರತೆ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದರು. ಹೌದು ಚಿರತೆ ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹುಲಿ ಜೊತೆ ಕಾದಾಡಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು