ರಾಮನಗರ: ಪೆಂಟಾ ಲಸಿಕೆ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಲ್ಲಿ ಒಂದೂವರೆ ತಿಂಗಳ ಮಗು ಸಾವು

ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಮಗು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ದೊಡ್ಡಮಳೂರು ಗ್ರಾಮದಲ್ಲಿ ಪೆಂಟಾ ವ್ಯಾಕ್ಸಿನ್ ಹಾಕಿಸಿದ ಒಂದು ಗಂಟೆ ಬಳಿಕ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದೆ.

ರಾಮನಗರ: ಪೆಂಟಾ ಲಸಿಕೆ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಲ್ಲಿ ಒಂದೂವರೆ ತಿಂಗಳ ಮಗು ಸಾವು
ರಾಮನಗರದ ಚನ್ನಪಟ್ಟಣದಲ್ಲಿ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು
Edited By: Rakesh Nayak Manchi

Updated on: Feb 13, 2024 | 4:53 PM

ರಾಮನಗರ, ಫೆ.13: ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಗಂಡು ಮಗು ಮೃತಪಟ್ಟ ಘಟನೆ ರಾಮನಗರ (Ramanagara) ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಜಸ್ವಿಕ್ ಮೃತ ಮಗು.

ಇಂದು ದೊಡ್ಡಮಳೂರು ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಪೆಂಟಾ ಲಸಿಕೆ ನೀಡಿದ್ದಾರೆ. ಈ ಮಕ್ಕಳ ಪೈಕಿ ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಮಗು ಕೂಡ ಒಂದಾಗಿತ್ತು. ಆದರೆ, ಜಸ್ವಿಕ್​ಗೆ ಚುಚ್ಚುಮದ್ದು ನೀಡಿದ ಒಂದು ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದೆ.

ಇದನ್ನೂ ಓದಿ: Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ಸೂಕ್ತ ರೀತಿಯಲ್ಲಿ ಮಗು ತಪಾಸಣೆ ಮಾಡದೇ ವ್ಯಾಕ್ಸಿನ್ ಹಾಕಿರುವ ಆರೋಪ ಕೇಳಿಬಂದಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಅದೇ ಗ್ರಾಮದಲ್ಲಿ 18 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. 18 ಮಕ್ಕಳ ಪೈಕಿ 17 ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಮನೆಯ ನೀರಿನ ಸಂಪ್‌ನಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಉತ್ತರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಮನೆಯ ನೀರಿನ ಸಂಪ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆಯ ನೀರಿನ ಸಂಪ್‌ನಲ್ಲಿ ಸುಮಾರು 40 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೂರು ದಿನಗಳ ಹಿಂದೆಯೇ ಕೊಲೆಗೈದು ಬಳಿಕ ಸಂಪ್‌ಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us