AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Edited By: |

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ