AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Edited By: |

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ