AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ