AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Edited By: |

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ