AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Edited By: |

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ