ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 01, 2024 | 11:05 PM

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಸಿಂಗಲ್ ಆಗಿರೋನೇ ಸಿಂಹ: ಅಸಲಿ ಆಟ ತೋರಿಸಲು ರೆಡಿಯಾದ ಲಾಯರ್ ಜಗದೀಶ್
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಮನೆಯ ಬಲೆಯೊಳಗೆ ಸಿಕ್ಕಿಬಿದ್ದ 7 ಅಡಿ ಉದ್ದದ ಹಾವು!
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು: ಸುರೇಶ್ ಲೆಕ್ಕಾಚಾರ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
Namma Metro: ಹಸಿರು ಮಾರ್ಗದ ನಾಗಸಂದ್ರ, ಮಾದಾವರ ನಮ್ಮ ಮೆಟ್ರೋ ರೆಡಿ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ