AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
TV9 Web
| Edited By: |

Updated on: Oct 01, 2024 | 11:05 PM

Share

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ