AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ರಸ್ತೆಗೆ 10 ರೂ. ನೋಟು ಬಿಸಾಡಿ 1 ಲಕ್ಷ ರೂ. ಹಣ ಎಗರಿಸಿದ ದುಷ್ಕರ್ಮಿ; ವಿಡಿಯೋ ನೋಡಿ

ಚನ್ನಪಟ್ಟಣದ ಕೆನರಾ ಬ್ಯಾಂಕ್ ಬಳಿ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದ 10 ರೂ. ನೋಟು ತೆಗೆದುಕೊಳ್ಳಲು ಹೋಗಿ 1 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ವಿವೇಕ ಬಿರಾದಾರ|

Updated on:Oct 10, 2023 | 8:59 AM

Share

ರಾಮನಗರ ಅ.10: ಚನ್ನಪಟ್ಟಣದ (Chennapattan) ಕೆನರಾ ಬ್ಯಾಂಕ್ ಬಳಿ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದ 10 ರೂ. ನೋಟು ತೆಗೆದುಕೊಳ್ಳಲು ಹೋಗಿ 1 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಂಗಳವಾರಪೇಟೆ ನಿವಾಸಿ ರಾಘವೇಂದ್ರ ಹಣ ಕಳೆದುಕೊಂಡವರು. ರಾಘವೇಂದ್ರ ಅವರು ಕೆನರಾ ಬ್ಯಾಂಕ್​ನಿಂದ (Canara Bank) 1 ಲಕ್ಷ ರೂ. ಹಣ ಡ್ರಾಮಾಡಿಕೊಂಡು ಹೊರಗೆ ಬಂದಿದ್ದಾರೆ. ಇದನ್ನು ಗಮನಿಸಿದ ವ್ಯಕ್ತಿಯೊಬ್ಬ ರಸ್ತೆಗೆ 10 ರೂ. ನೋಟು ಬಿಸಾಡಿ ಹಣ ಬಿದ್ದಿದ್ದೆ ಎಂದು ಹೇಳಿದ್ದಾನೆ.

ರಾಘವೇಂದ್ರ ಅವರು 1 ಲಕ್ಷ ರೂ. ಹಣವಿದ್ದ ಕವರ್​​ ಅನ್ನು​ ಬೈಕ್ ಮೇಲೆ ಇಟ್ಟು 10 ರೂ. ಎತ್ತಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಆರೋಪಿ ಕ್ಷಣಾರ್ಧದಲ್ಲೇ 1 ಲಕ್ಷ ರೂ. ಹಣವಿದ್ದ ಕವರ್ ಎಗರಿಸಿ ಪರಾರಿಯಾಗಿದ್ದಾನೆ. ಆರೋಪಿ ಹಣ ತೆಗೆದುಕೊಂಡು ಹೋಗುತ್ತಿರುವುದನ್ನು ಮಹಿಳೆಯೊಬ್ಬರು ಕಂಡು ಕೈಸನ್ನೆ ಮಾಡಿ “ಯಾರೋ ನಿನ್ನ ಬ್ಯಾಗ್ ಎತ್ತಿಕೊಂಡು ಹೋಗುತ್ತಿದ್ದಾರೆ ನೋಡಿ ಎಂದು” ರಾಘವೇಂದ್ರ ಅವರಿಗೆ ಎಚ್ಚರಿಸಲು ಪ್ರಯತ್ನ ಪಟ್ಟರು.

ಇದನ್ನೂ ಓದಿ: ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಹೈಟೆಕ್‌ ದರೋಡೆಕೋರರು

ಆದರೆ ರಾಘವೇಂದ್ರ ಅವರಿಗೆ ಮಹಿಳೆಯ ಕೈಸನ್ನೆ ಭಾಷೆ ಅರ್ಥವಾಗದೆ ಎಚ್ಚೆತ್ತುಕೊಳ್ಳಲಿಲ್ಲ. ಖತರ್ನಾಕ್ ಕಳ್ಳನ ಕೈಚಳಕ ಬ್ಯಾಂಕ್ ಮುಂದಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Tue, 10 October 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ