AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ

ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ
ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಆರೋಪಿ.
Lakshmi Hegde
|

Updated on: Nov 28, 2020 | 8:05 PM

Share

ನೆಲಮಂಗಲ: ಸಲಿಂಗಕಾಮಕ್ಕೆ ಒಪ್ಪದ ವ್ಯಕ್ತಿಯನ್ನು ಹತ್ಯೆ ಮಾಡಿದ್ದವನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಯಾದವ್​ ಪಾಂಡೆ​ (35) ಬಂಧಿತ. ಸಿಕಂದರ್ (38) ಹತ್ಯೆಯಾದವನು.

ಸುನೀಲ್​ ಹಾಗೂ ಸಿಕಂದರ್​ ಇವರಿಬ್ಬರೂ ಕಡಬಗೆರೆ ಗೇಟ್​ನ ಬಳಿ ಇರುವ ಖಾಸಗಿ ಸ್ಟೀಲ್​ ಕಂಪನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್​ 29ರಂದು ಸುನೀಲ್​ ಸಿಕಂದರ್​ ಬಳಿ ಸಲಿಂಗ ಸೆಕ್ಸ್​ಗೆ ಒತ್ತಾಯಿಸಿ, ಬಲವಂತ ಮಾಡಿದ್ದ. ಆಗ ಸಿಕಂದರ್ ಅದಕ್ಕೆ ಪ್ರತಿರೋಧ ಒಡ್ಡಿದ್ದ. ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿತ್ತು. ಆಂಧ್ರದ ರೇಣಿಗುಂಟ ಕೈಗಾರಿಕಾ ಪ್ರದೇಶದ ಬಳಿ ತಲೆ ಮರೆಸಿಕೊಂಡಿದ್ದ ಸುನೀಲ್​ ಯಾದವ್​ ಪಾಂಡೆಯನ್ನು ಇಂದು ತಿರುಪತಿ ಬಳಿ ಪೊಲೀಸರು ಬಂಧಿಸಿದ್ದಾರೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ