AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕಳ್ಳತನದ ಕೋಳಿ ಖರೀದಿಸುತ್ತಿದ್ದ ರೌಡಿಶೀಟರ್, ಪ್ರಶ್ನಿಸಿದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ

ಕೋಳಿ ಅಂಗಡಿ ಇಟ್ಟುಕೊಂಡಿರುವ ರೌಡಿಶೀಟರ್ ಕಳ್ಳತನ ಮಾಡಿ ತಂದುಕೊಡುತ್ತಿದ್ದ ಕೋಳಿಗಳನ್ನು ಖರೀದಿ ಮಾಡುತ್ತಿದ್ದನು. ಇದನ್ನು ಪ್ರಶ್ನಿಸಿದ ವ್ಯಕ್ತಿಗೆ ರೌಡಿಶೀಟರ್ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಕೋಲಾರ ನಗರದ ಅಮ್ಮವಾರಪೇಟೆ ವೃತ್ತದಲ್ಲಿ ನಡೆದಿದೆ. ಘಟನೆ‌ ಕಂಡು ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೋಲಾರ: ಕಳ್ಳತನದ ಕೋಳಿ ಖರೀದಿಸುತ್ತಿದ್ದ ರೌಡಿಶೀಟರ್, ಪ್ರಶ್ನಿಸಿದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ
ಕಳ್ಳತನದ ಕೋಳಿ ಖರೀದಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ರೌಡಿಶೀಟರ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: Rakesh Nayak Manchi|

Updated on: Jan 05, 2024 | 11:36 AM

Share

ಕೋಲಾರ, ಜ.5: ಕಳ್ಳತನದ ಕೋಳಿಗಳನ್ನು ಖರೀದಿ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ ಯುವಕನ ಮೇಲೆ ರೌಡಿಶೀಟರ್ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಕೋಲಾರ (Kolar) ನಗರದ ಅಮ್ಮವಾರಪೇಟೆ ವೃತ್ತದಲ್ಲಿ ನಡೆದಿದೆ. ತಾಜ್​ಫೀರ್ ಎಂಬಾತ ಹಲ್ಲೆಗೆ ಯತ್ನಿಸಿದ್ದು, ಪೊಲೀಸರು ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಅಮ್ಮವಾರಪೇಟೆ ವೃತ್ತದಲ್ಲಿ ತಾಜ್​ಫೀರ್ ಕೋಳಿ ಮಾಂಸದ ಅಂಗಡಿ ಇಟ್ಟುಕೊಂಡಿದ್ದು, ಕಾದರಿಪುರದಲ್ಲಿ ಕಳ್ಳತನ ಮಾಡಿ ತರುತ್ತಿದ್ದ ಕೋಳಿಗಳನ್ನು ಖರೀದಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಳ್ಳತನದ ಕೋಳಿ ಖರೀದಿ ಬಗ್ಗೆ ತನಗೆ ಗೊತ್ತಿಲ್ಲ ಎನ್ನುತ್ತಿದ್ದಾನೆ. ಆದರೆ, ಇಲ್ಲಿ ಕಳ್ಳತನದ ಕೋಳಿಗಳನ್ನು ಖರೀದಿಸುತ್ತಿರುವುದು ಈತನೊಬ್ಬನೇ ಎಂದು ಕಿರಣ್ ಆರೋಪಿಸಿದ್ದಾರೆ.

ಇದನ್ನೂ ಓದಿ: ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ! ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆ

ಅಲ್ಲದೆ, ಕಡಿಮೆ ಮೆಲೆಗೆ ಕೋಳಿಗಳನ್ನು ಖರೀದಿಸುತ್ತಿದ್ದಾನೆ ಎಂದು ಆರೋಪಿಸಿದ ಕಿರಣ್, ಒಂದೂವರೆ ಸಾವಿರ ರೂಪಾಯಿ ಕೋಳಿಗಳನ್ನು 800 ರೂಪಾಯಿಗೆ ಖರೀದಿಸುತ್ತಿದ್ದಾನೆ ಎಂದಿದ್ದಾರೆ. ಈ ವೇಳೆ ಕುಪಿತಗೊಂಡ ತಾಜ್​ಫೀರ್, ಅಂಗಡಿಯೊಳಗಿದ್ದ ಕೋಳಿ ಮಾಂಸ ಮಾಡಲು ಬಳಸುತ್ತಿದ್ದ ಕತ್ತಿಯಿಂದ ಕಿರಣ್ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಕೂಡಲೇ ಹಲ್ಲೆಯಿಂದ ತಪ್ಪಿಸಿಕೊಂಡ ಕಿರಣ್ ತಾಜ್​ಫೀರ್​ನನ್ನು ಹಿಡಿದು ಥಳಿಸಿದ್ದು, ಅಲ್ಲೇ ಇದ್ದ ಪೊಲೀಸ್ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?