AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್​​ನನ್ನೇ ಬರ್ಬರವಾಗಿ ಹತ್ಯೆಗೈದ ಕಾಲೇಜು ವಿದ್ಯಾರ್ಥಿ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿರುವುದು ನಿಜಕ್ಕೂ ದುರಂತ. ಅದರಂತೆ ಇಂದು(ಜು.03) ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜಿನ(Sindhi College) ವಿದ್ಯಾರ್ಥಿಯೊಬ್ಬ, ಅದೇ ಕಾಲೇಜಿನ ಸೆಕ್ಯೂರಿಟಿ ಗಾರ್ಡ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್​​ನನ್ನೇ ಬರ್ಬರವಾಗಿ ಹತ್ಯೆಗೈದ ಕಾಲೇಜು ವಿದ್ಯಾರ್ಥಿ
ಆರೋಪಿ ವಿದ್ಯಾರ್ಥಿ, ಮೃತ ಸೆಕ್ಯೂರಿಟಿ ಗಾರ್ಡ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 03, 2024 | 6:04 PM

Share

ಬೆಂಗಳೂರು, ಜು.03: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ನನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜಿನ(Sindhi College)ಲ್ಲಿ ಇಂದು(ಬುಧವಾರ) ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಕಾಲೇಜು ಸೆಕ್ಯೂರಿಟಿ ಗಾರ್ಡ್ ಆಗಿದ್ದ ಜೈಕಿಶೋರ್ ರಾಯ್ ಮೃತ ರ್ದುದೈವಿ. ಭಾರ್ಗವ್ ಎಂಬ ವಿದ್ಯಾರ್ಥಿ, ಬರೋಬ್ಬರಿ 5 ರಿಂದ 6 ಬಾರಿ ಚಾಕುವಿನಿಂದ ಇರಿದಿದ್ದ ಪರಿಣಾಮ ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಕಾರಣವೇನು?

ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ, ಸೊಸೆ ತವರು ಮನೆ ಸೇರಿದ್ದಕ್ಕೆ ಸಾವಿಗೆ ಶರಣಾದ್ರಾ?

ಕಿಶೋರ್ ರಾಯ್ ಕೊಲೆಗೆ ಕುಟುಂಬಸ್ಥರ ಆಕ್ರೋಶ

ಹತ್ಯೆಯಾದ ಜೈ ಕಿಶೋರ್ ರಾಯ್ ಸಿಂಧಿ ಕಾಲೇಜಿನ ಕ್ಲೀನಿಂಗ್ ಇನ್​ಚಾರ್ಜ್ ಆಗಿದ್ದರು. ಆದರೂ ಅವರನ್ನು ಸೆಕ್ಯೂರಿಟಿ ಕೆಲಸಕ್ಕೆ ನೇಮಿಸಿದ್ದು ಯಾಕೆ ಎಂದು ಕೊಲೆಗೀಡಾಗಿರುವ ಜೈಕಿಶೋರ್ ರಾಯ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ರಾಯ್ ಕೊಲೆಗೆ ಸಿಂಧಿ ಕಾಲೇಜು ಆಡಳಿತ ಮಂಡಳಿಯೇ ಕಾರಣ, ಅವರು ಯಾವುದೇ ಸುರಕ್ಷತಾ ಕ್ರಮಕೈಗೊಂಡಿಲ್ಲವೆಂದು ಕಿಡಿಕಾರಿದ್ದಾರೆ. ಈ ವೇಳೆ ಸಿಂಧಿ ಕಾಲೇಜಿನ ಮುಂದೆ ಜೈಕಿಶೋರ್ ರಾಯ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ