AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಹೆತ್ತು-ಹೊತ್ತು ಸಾಕಿದ ತಂದೆ-ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ

ಹೆತ್ತು ಹೊತ್ತು ಸಾಕಿದ ತಂದೆ–ತಾಯಿ ಪೋಷಣೆ ಮಕ್ಕಳ ಜವಾಬ್ದಾರಿ. ಆದ್ರೆ, ಇಲ್ಲೋರ್ವ ಕ್ರೂರಿ ಮಗ ಹೆತ್ತವರನ್ನೇ ಬರ್ಬರವಾಗಿ ಹತ್ಯೆಗೈದಿದ್ದಾನೆ.

Bengaluru News: ಹೆತ್ತು-ಹೊತ್ತು ಸಾಕಿದ ತಂದೆ-ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 18, 2023 | 2:24 PM

Share

ಬೆಂಗಳೂರು, (ಜುಲೈ 18): ಹೆತ್ತು-ಹೊತ್ತು ಸಾಕಿದ ತಂದೆ-ತಾಯಿಯನ್ನೇ (Father And Mother) ಪಾಪಿ ಮಗ ಬರ್ಬರವಾಗಿ ಕೊಲೆ(Murder) ಮಾಡಿರುವ ಘಟನೆ ಬೆಂಗಳೂರಿನ(Bengaluru) ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ನಡೆದಲ್ಲಿ ನಡೆದಿದೆ. ಶರತ್ ಎನ್ನುವಾತ ತನ್ನ ತಂದೆ ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ಸಹ ಶರತ್, ತನ್ನ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಈ ಬಾರಿ ಅವರ ಪ್ರಾಣವನ್ನೇ ತೆಗೆದಿದ್ದಾನೆ.

ಇದನ್ನೂ ಓದಿ: Belagavi News: ಗಂಡನ ಪಾದ ಪೂಜೆ ಮಾಡಿ ಬಳಿಕ ದೇಗುಲಕ್ಕೆ ಕರೆದೊಯ್ದು ಪತಿಯನ್ನು ಬಲಿ ಕೊಟ್ಟ ಪತ್ನಿ

ಶಾಂತಾ ಇತ್ತೀಚೆಗೆ ಕೇಂದ್ರದ ನೌಕರಿಯಿಂದ ನಿವೃತ್ತಿಯಾಗಿ ಮನೆಯಲ್ಲಿದ್ದರೆ, ಪತಿ ಭಾಸ್ಕರ್ ಖಾಸಗಿ ಕ್ಯಾಂಟೀನ್​ವೊಂದರಲ್ಲಿ ಕ್ಯಾಶಿಯರ್ ಆಗಿದ್ದ. ಇನ್ನು ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಇನ್ನೊಬ್ಬ ಮಗ ಕೆಲಸಕ್ಕೆ ಹೋಗುತ್ತಿದ್ದರೆ ಮತ್ತೋರ್ವ ಮಗ ಆರೋಪಿ ಶರತ್ ಮನೆಯಲ್ಲೇ ಇರುತ್ತಿದ್ದ.ಅಲ್ಲದೇ ಶರತ್ ಮನೆಯಲ್ಲಿ ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದ. ನಿನ್ನೆ(ಜುಲೈ 17) ಸಹ ಸಂಜೆ ಕುಡಿದು ಬಂದು ತಂದೆ-ತಾಯಿ ಜೊತೆ ಗಲಾಟೆ ಮಾಡಿಕೊಂಡಿದ್ದು, ಆ ವೇಳೆ ಶಾಂತಾ ಹಾಗೂ ಭಾಸ್ಕರ್​ಗೆ ರಾಡ್​ನಿಂದ ಹೊಡೆದು ಹತ್ಯೆಗೈದಿದ್ದಾನೆ. ಬಳಿಕ ಮನೆ ಲಾಕ್ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಇಂದು(ಜುಲೈ 18) ಬೆಳಗ್ಗೆ ದೊಡ್ಡ ಮಗ ತಂದೆ-ತಾಯಿ ಕರೆ ಮಾಡಿದ್ದಾನೆ. ಆದ್ರೆ, ಅವರು ಆಗಲೇ ಕೊಲೆಯಾಗಿ ಬಿದ್ದಿದ್ದರಿಂದ ಇಬ್ಬರೂ ಫೋನ್ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾನೆ. ಆಗ ಪಕ್ಕದ ಮನೆಯವರು ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿನ್ನೆ(ಜುಲೈ 17) ಸಂಜೆ ಅಥವಾ ರಾತ್ರಿ ಸಮಯದಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.

ಇನ್ನು ಈ ಪ್ರಕರಣದ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದ್ದು, ಇಂದು ಕೊಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಂದೆ ತಾಯಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಮೊದಲ ಮಗ ದೂರು ನೀಡಿದ್ದಾರೆ. ಶರತ್(ಮೃತರ ಎರಡನೇ ಮಗ)​ ಈ ಕೃತ್ಯ ಎಸಗಿದ್ದಾನೆ ಎಂದು ಅರೋಪಿಸಿ ದೂರು ನೀಡಿದ್ದಾರೆ. ದೂರಿನ ಅನ್ವಯ ಕೇಸ್ ದಾಖಲು ಮಾಡಲಾಗಿದ್ದು, ಆರೋಪಿ ಅರೋಪಿ ಶರತ್​ಗಾಗಿ ಹುಡುಕಾಟ ನಡೆಸುತಿದ್ದೆವೆ ಎಂದು ಮಾಹಿತಿ ನೀಡಿದರು.

Published On - 12:32 pm, Tue, 18 July 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ