AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ. ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ […]

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್
ಸಾಧು ಶ್ರೀನಾಥ್​
|

Updated on: Aug 22, 2020 | 7:10 PM

Share

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ.

ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಶೀಟ್ ಹೊಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ಹಂತಕರು, ಮಲಗಿದ್ದ ಗೀತಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

ಮೃತ ಗೀತಾಳ ಪಿತ್ರಾರ್ಜಿತ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಮಗ ವರುಣ್ ದಿನನಿತ್ಯ ತಾಯಿಯೊಂದಿಗೆ ಜಗಳ ತೆಗೆಯುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಮಗನಿಗೆ ಆಸ್ತಿ ನೀಡಲು ಒಪ್ಪದ ತಾಯಿಯನ್ನು, ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ. ಸದ್ಯ ಮಗ ವರುಣ್​ಗೆ ಹತ್ಯೆ ಮಾಡಲು ಸಹಕಾರ ನೀಡಿದ್ದರಿಂದ ತಂದೆ ಆಂಜನಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್