AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ. ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ […]

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್
ಸಾಧು ಶ್ರೀನಾಥ್​
|

Updated on: Aug 22, 2020 | 7:10 PM

Share

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ.

ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಶೀಟ್ ಹೊಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ಹಂತಕರು, ಮಲಗಿದ್ದ ಗೀತಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

ಮೃತ ಗೀತಾಳ ಪಿತ್ರಾರ್ಜಿತ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಮಗ ವರುಣ್ ದಿನನಿತ್ಯ ತಾಯಿಯೊಂದಿಗೆ ಜಗಳ ತೆಗೆಯುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಮಗನಿಗೆ ಆಸ್ತಿ ನೀಡಲು ಒಪ್ಪದ ತಾಯಿಯನ್ನು, ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ. ಸದ್ಯ ಮಗ ವರುಣ್​ಗೆ ಹತ್ಯೆ ಮಾಡಲು ಸಹಕಾರ ನೀಡಿದ್ದರಿಂದ ತಂದೆ ಆಂಜನಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ