Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು

ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿಯೊರ್ವ, ಕನಸು ನನಸಾಗದೆ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. ನಯಾಜ್ ಪಾಷ ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿ.

Chikkaballapur News: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ, ಕನಸು ನನಸಾಗದೇ ಆತ್ಮಹತ್ಯೆಗೆ ಶರಣು
ಮೃತ ವಿದ್ಯಾರ್ಥಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 1:07 PM

ಚಿಕ್ಕಬಳ್ಳಾಪುರ: ವೈದ್ಯನಾಗಬೇಕೆಂಬ ಕನಸು ಕಂಡಿದ್ದ ವಿದ್ಯಾರ್ಥಿ(Student)ಯೊರ್ವ, ಕನಸು ನನಸಾಗದೆ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ. ಶಿಡ್ಲಘಟ್ಟ ನಗರದ ನಿವಾಸಿ ನಯಾಜ್ ಪಾಷ ಆತ್ಮಹತ್ಯಗೆ ಶರಣಾದ ವಿದ್ಯಾರ್ಥಿ. ಇತ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದ. ಈ ಹಿನ್ನಲೆ ಮೆಡಿಕಲ್​ಗೆ ಸೇರಲು ಸಾಧ್ಯವಾಗದೆ ಖಾಸಗಿ ಖೋಟಾದಡಿ ಮೆಡಿಕಲ್​ಗೆ ಸೇರಿಸುವಂತೆ ಮನೆಯಲ್ಲಿ ಒತ್ತಾಯ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರದಲ್ಲಿ ನಯಾಜ್ ಪಾಷಾ ನಿನ್ನೆ(ಜು.11) ರಾತ್ರಿ ಕುಟುಂಬಸ್ಥರೊಂದಿಗೆ ಬೇಸರ ಮಾಡಿಕೊಂಡಿದ್ದನಂತೆ. ಇಂದು(ಜು.12) ಬೆಳಿಗ್ಗೆ ಶಿಡ್ಲಘಟ್ಟ ನಗರದ ಹೊರವಲಯದ ಅಮ್ಮನ ಕರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶಿಡ್ಲಘಟ್ಟ ನಗರ ಠಾಣೆ ಪೊಲೀಸರು ಅನುಮಾನಸ್ಫದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾದ ವೈದ್ಯ

ಬಳ್ಳಾರಿ: ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಸಂಜೀವಿನಿ ಆಸ್ಪತ್ರೆಯ ವೈದ್ಯರೊಬ್ವರು ನಿನ್ನೆ(ಜು.11) ಸಂಜೆ ವಿದ್ಯಾನಗರ ಬಡಾವಣೆಯ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ಪಿ.ಸಿಂಗ್ (62) ಆತ್ಮಹತ್ಯೆಗೆ ಶರಣಾದ ಮೃತ ರ್ದುದೈವಿ. ಇವರು ಕಳೆದ ವರ್ಷವಷ್ಟೇ ಜಿಂದಾಲ್ ಆಸ್ಪತ್ರೆಯ ಸೇವೆಗೆ ಸೇರಿದ್ದರು. ವೈದ್ಯಕೀಯ ವಿಭಾಗದ ನಿರ್ವಹಣೆಯನ್ನು ಮಾಡುತ್ತಿದ್ದ ಇವರು ಮನೆಯಲ್ಲಿ ಪತ್ನಿ‌ ಇರದ ಸಮಯದಲ್ಲಿ ಪ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಪತ್ನಿ ಸಂಜೆ ಬಂದು ನೋಡಿದ ಮೇಲೆ ಈ ವಿಷಯ ಗೊತ್ತಾಗಿದೆ.

ಇದನ್ನೂ ಓದಿ:Uttar Pradesh: ಹೆದ್ದಾರಿಯಲ್ಲಿ ಕಾರಿನಲ್ಲಿ ಹೋಗುತ್ತಿರುವಾಗಲೇ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಮೂರು ಅಂಗಡಿಗಳ ಶಟರ್ ಬೀಗ ಮುರಿದು ಕಳ್ಳತನ‌

ತುಮಕೂರು: ಮೂರು ಅಂಗಡಿಗಳ ಶಟರ್ ಬೀಗ ಮುರಿದು ಕಳ್ಳತನ‌ ಮಾಡಿದ ಘಟನೆ ತುಮಕೂರು ತಾಲೂಕಿನ ಬೆಳ್ಳಾವಿ ಕ್ರಾಸ್​ನಲ್ಲಿ ನಡೆದಿದೆ. ಕಳ್ಳ ಬೀಗ ಮುರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಒಂದು ಪೇಂಟ್ ಹಾಗೂ ಎರಡು ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದು, ಬೆಳ್ಳಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಘಟನೆ ಮಧ್ಯರಾತ್ರಿ 1 ಗಂಟೆಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಕಳ್ಳನ ಗುರುತು ಪತ್ತೆಯಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ