AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ!

ಅದೊಂದು ಗ್ರಾಮದ ಹೊರವಲಯದಲ್ಲಿರುವ ಒಂಟಿ‌ ಮನೆ. ಗಂಡ ಹೆಂಡತಿ ಒಬ್ಬ ಮಗ ವಾಸವಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಮರ ಕತ್ತರಿಸುವ ಯಂತ್ರ ಮಾರಾಟ ಮಾಡುವ ನೆಪದಲ್ಲಿ ಮನೆನುಗ್ಗಿ ರಕ್ತದ ಕೋಡಿ ಹರಿಸಿದ್ದಾನೆ. ಹೌದು...ತೋಟದ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮರ ಕತ್ತರಿಸುವ ಯಂತ್ರದಲ್ಲಿ ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ!
ಮೃತ ರಮೇಶ್ , ಮರ ಕತ್ತರಿಸುವ ಯಂತ್ರ
ಪ್ರಶಾಂತ್​ ಬಿ.
| Edited By: |

Updated on: Dec 22, 2024 | 3:35 PM

Share

ಮಂಡ್ಯ, (ಡಿಸೆಂಬರ್ 22): ತೋಟದ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮರ ಕತ್ತರಿಸುವ ಯಂತ್ರದಲ್ಲಿ ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. 60 ವರ್ಷದ ರಮೇಶ್ ಕೊಲೆಯಾದ ದುರ್ದೈವಿ. ಮರ ಕತ್ತರಿಸುವ ಯಂತ್ರದಿಂದಲೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇನ್ನೂ ಪಾಪಿಯ ಕೈಯಲ್ಲಿ ಸಿಲುಕಿ ಮೃತ ರಮೇಶ್ ಪತ್ನಿ ಯಶೋಧಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ (ಡಿಸೆಂಬರ್ 21) ಸಂಜೆ ಏಳು ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ, ರಮೇಶ್ ಮನೆಗೆ ಬಂದು ಮರ ಕತ್ತರಿಸುವ ಯಂತ್ರ ಬುಕ್ ಮಾಡಿದ್ದಾರೆ ಎಂದು ಬಾಗಿಲು ತಟ್ಟಿದ್ದಾನೆ. ಈ ವೇಳೆ ಯಶೋಧಮ್ಮ ನಾವು ಯಾವುದನ್ನು ಬುಕ್ ಮಾಡಿಲ್ಲ ಎಂದು ಹೇಳುತ್ತಿದ್ದಂತೆ ಯಶೋಧಮ್ಮ ‌ಮೇಲೆ ಅಟ್ಯಾಕ್ ಮಾಡಿದ್ದಾನೆ. ಮರ ಕತ್ತರಿಸುವ ಯಂತ್ರವನ್ನು ಆನ್ ಮಾಡಿ ಯಶೋಧಮ್ಮ ಮುಖದ ಭಾಗಕ್ಕೆ ಹಿಡಿದಿದ್ದಾನೆ. ಈ ಹಿನ್ನೆಲೆಯಲ್ಲಿ ಯಶೋಧಮ್ಮ ಪ್ರಜ್ಞೆ ತಪ್ಪಿದ್ದಾಳೆ. ನಂತರ ಮನೆಯೊಳಗೆ ನುಗ್ಗಿದ ಆರೋಪಿ ಮನೆಯೊಳಗೆ ಇದ್ದ ರಮೇಶ್ ಮೇಲೆ ಅಟ್ಟಹಾಸ ಮೆರೆದಿದ್ದಾನೆ.

ಇದನ್ನೂ ಓದಿ: ಆಶ್ರಯ ಕೊಟ್ಟವನನ್ನೇ ಕೊಂದ ದುರುಳ: ಸಲಿಂಗಕಾಮಕ್ಕೆ ವಿರೋಧಿಸಿದ್ದಕ್ಕೆ ಸ್ನೇಹಿತನ ಕತೆ ಮುಗಿಸಿದ!

ಮಲಗಿದ್ದ ರಮೇಶ್ ಅವರ ಕುತ್ತಿಗೆಗೆ ಮರ ಕತ್ತರಿಸುವ ಯಂತ್ರವನ್ನು ಹಿಡಿದಿದ್ದಾನೆ. ನಂತರ ರಮೇಶ್ ಕೈ ಭಾಗಕ್ಕೆ ಎಲ್ಲಾ ಹಿಡಿದು ಬರ್ಬರವಾಗಿ ಹತ್ಯೆ ಮಾಡುತ್ತಾನೆ. ಈ‌ ವೇಳೆ ಪ್ರಜ್ಞೆ ತಪ್ಪಿದ್ದ ಯಶೋಧಮ್ಮ ಎಚ್ಚರಗೊಂಡು ಮನೆಯ ಬಾಗಿಲನ್ನು ಹೊರಗಡೆಯಿಂದ ಲಾಕ್ ಮಾಡಿ, ನಂತರ ಸ್ಥಳೀಯರನ್ನು ಕರೆದಿದ್ದಾರೆ. ಈ ವೇಳೆ ಮರ ಕತ್ತರಿಸುವ ಯಂತ್ರದ ಮೂಲಕ ಬಾಗಿಲನ್ನು ಕೊಯ್ಯಲು ಸಹ ಆತ ಯತ್ನಿಸಿದ್ದಾನೆ. ಆದ್ರೆ, ಅದು ಸಾಧ್ಯವಾಗಿಲ್ಲ.

ಇನ್ನು ಅಕ್ಕಪಕ್ಕದ ಜನರು ಸೇರಿಕೊಂಡು ತಕ್ಷಣ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆಯ ಒಳಗೆ ಬಂಧಿಯಾಗಿದ್ದ ಆರೋಪಿಯನ್ನ ಆಚೆ ಕರೆದುಕೊಂಡು ಬರುತ್ತಿದ್ದಂತೆಯೇ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇದರಿಂದ ಅಸ್ವಸ್ಥಗೊಂಡಿರುವ ಆರೋಪಿಯನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಕೊಲೆ ಆರೋಪಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯಶೋಧಮ್ಮರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಇದೇ ವೇಳೆ ಮತ್ತೊಬ್ಬ ಶಂಕಿತ ಆರೋಪಿಯನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಒಂಟಿ ಮನೆಯಲ್ಲಿ ನಡೆದ ಭೀಕರ ಹತ್ಯೆಗೆ ಇಡೀ ಮಂಡ್ಯ ಜನ ಬೆಚ್ಚಿ ಬಿದ್ದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!