AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಗುಂಡು ಹಾರಿಸಿ ಎಸ್ಕೇಪ್​ ಆದ ಅಪರಿಚಿತ ವ್ಯಕ್ತಿ; ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದ ಮಹಿಳೆ

ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ.

ಮಹಿಳೆ ಮೇಲೆ ಗುಂಡು ಹಾರಿಸಿ ಎಸ್ಕೇಪ್​ ಆದ ಅಪರಿಚಿತ ವ್ಯಕ್ತಿ; ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದ ಮಹಿಳೆ
ಸಾಂದರ್ಭಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:May 08, 2022 | 7:37 PM

Share

ಗುಳೇದಗುಡ್ಡ: ಕಟ್ಟಡಕ್ಕೆ ನೀರು ಹೊಡೆಯುತ್ತಿದ್ದ ಮಹಿಳೆ (Woman) ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಎಸ್ಕೇಪ್​ ಆದಂತಹ ಘಟನೆ ನಗರದ ನುಗ್ಲಿ ಓಣಿಯಲ್ಲಿ ನಡೆದಿದೆ. ದ್ಯಾಮವ್ವ ಕಕ್ಕೇರಿ(45) ಗುಂಡಿನಿಂದ ಗಾಯಗೊಂಡಿರುವ ಮಹಿಳೆ. ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ಎರಡು ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, 108 ನಲ್ಲಿ ಮಹಿಳೆಯನ್ನು ಬಾಗಲಕೋಟೆಗೆ ಹೆಚ್ಚಿನ‌ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಭೇಟಿ ನಿಡದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ:

ತುಮಕೂರು: ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಶವ ಕೆರೆಯಲ್ಲಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಬೆಂಡೋಣೆದಲ್ಲಿ ನಡೆದಿದೆ. ಮೂರ್ನಾಲ್ಕು ದಿನಗಳ ಹಿಂದೆ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆ ಮಾಡಿಕೊಂಳ್ಳಲಾಗಿದೆ ಎನ್ನಲಾಗುತ್ತಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಕಸ್ಮಿಕ ಅಗ್ನಿ ಅವಘಡ; ಕರಕಲಾದ ಎಂಟು ಗುಡಿಸಲು

ಯಾದಗಿರಿ: ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಎಂಟು ಗುಡಿಸಲುಗಳು ಸುಟ್ಟು ಕರಕಲಾದಂತಹ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಗುಡಿಸಲುಗಳಲ್ಲಿ ವಾಸವಾಗಿದ್ದ ಕುಟುಂಗಳು ಅಪಾಯದಿಂದ ಪಾರಾಗಿದ್ದಾರೆ. ಗುಡಿಸಲುಗಳಲ್ಲಿದ್ದ ದವಸ ಧಾನ್ಯಗಳು, ನಗದು ಹಣ ಸುಟ್ಟು ಕರಕಲಾಗಿವೆ. ಸ್ಥಳೀಯರು ಬೆಂಕಿ ನಂದಿಸುವಷ್ಟರಲ್ಲಿ ಗುಡಿಸಲುಗಳು ಸುಟ್ಟು ಹೋಗಿದ್ದು, ಕೈಲಾದಷ್ಟು ವಸ್ತುಗಳನ್ನ ಹೊರತೆಗೆದಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:

ತುಮಕೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಕೊರಟಗೆರೆ ತಾಲೂಕಿನ ಕೈಮರ ಬಳಿ ಘಟನೆ ನಡೆದಿದೆ. ತಿರುವಿನಲ್ಲಿ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ರವಿಕುಮಾರ್ 32 ಮೃತ ದುರ್ದೈವಿ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಹಲ್ಲೆ ವ್ಯಕ್ತಿ ಸಾವು

ಕುಡಿದ ಮತ್ತಿನಲ್ಲಿ ಹಣದ ವಿಚಾರಕ್ಕೆ ಮಾರಣಾಂತಿಕ ಹಲ್ಲೆ ನಡೆದಿದ್ದು ವ್ಯಕ್ತಿ ಮೃತಪಟ್ಟ ಘಟನೆ ಯಲಹಂಕ ನ್ಯೂ ಟೌನ್ ನ ಅಟ್ಟೂರು ಬಳಿ ನಡೆದಿದೆ. ರವಿಕಿರಣ್ (27) ಮೃತ ದುರ್ದೈವಿ. ಕಳೆದ ತಿಂಗಳ 25 ರಂದು ರಾತ್ರಿ ರವಿ ಕಿರಣ್ ಜೊತೆ ಕುಡಿದು ಗಲಾಟೆ ಮಾಡಿದ್ದ ಬಾಲಕೃಷ್ಣ ಇದೇ ವೇಳೆ ಕಿರಣ್ ತಲೆ ಮೇಲೆ ಇಟ್ಟಿಗೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಗಾಯಾಳುವನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. 307 ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಾಲಕೃಷ್ಣನನ್ನು ಪೊಲೀಸರು ಬಂಧಿಸಿದ್ದರು. ಸದ್ಯ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ 302 ಅಡಿ ಪ್ರಕರಣ ದಾಖಲು ದಾಖಲಾಗಿದ್ದು ಬಾಲಕೃಷ್ಣ ಅಪರಾಧ ಹಿನ್ನಲೆವುಳ್ಳವನಾಗಿದ್ದು, ಆಗಾಗ ಏರಿಯಾದಲ್ಲಿ ಕುಡಿದು ಹಲ್ಲೆ ಗಲಾಟೆ ಮಾಡ್ತಿದ್ದ ಎಂದು ತಿಳಿದು ಬಂದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:00 pm, Sun, 8 May 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್