AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ

ತನ್ನ ಸುಖಕ್ಕಾಗಿ ಗಂಡನ ಕೊಲೆ ಮಾಡಿ ಮಳ್ಳಿ ತರ ಶವಗಾರದ ಮುಂದೆ ಕಣ್ಣೀರು ಹಾಕಿದ್ದಳು. ನನಗೇನೂ ಗೊತ್ತಿಲ್ಲ ಎಂದು ಇಬ್ಬರು ಪ್ರಿಯತಮರ ಜೊತೆ ಸೇರಿ ಗಂಡನ ಕತ್ತುಕೊಯ್ದು ನಾಟಕವಾಡಿದ್ದ ಪತ್ನಿಯ ನಿಜಬಣ್ಣವನ್ನ ಪೊಲೀಸ್ರು ಬಟಾಬಯಲು ಮಾಡಿದ್ದಾರೆ. ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾದ ಎಂದು ಕೊಲೆ ಮಾಡಿದ್ದ ಪತ್ನಿ ಸಮೇತ ಇಬ್ಬರು ಕೊಲೆ ಆರೋಪಿಗಳು ಕಂಬಿ ಹಿಂದೆ ಬಿದ್ದಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ
ಬಂಧಿತ ಆರೋಪಿಗಳು
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 04, 2024 | 10:12 PM

Share

ಮೈಸೂರು, (ನವೆಂಬರ್ 04): ಮಹಿಳೆಯೋರ್ವಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದಯ ತಾಳಿ ಕಟ್ಟಿದ ಗಂಡನನ್ನೇ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಸಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ ತನ್ನಿಬ್ಬರು ಗೆಳೆಯರಾದ ರಂಗಸ್ವಾಮಿ, ಶಿವಯ್ಯ ಎನ್ನುವರ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಬಳಿಕ ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಬಿಂಬಿಸಿ ರಾಜೇಶ್ವರಿ ಬಿಕ್ಕಿಬಿಕ್ಕಿ ಅತ್ತಿದ್ದಳು. ಆದ್ರೆ, ಪೊಲೀಸರು ತನಿಖೆ ನಡೆಸಿದಾಗ ಪತ್ನಿಯ ನವರಂಗಿಯಾಟ ಬಯಲಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲೊಂದು ಐನಾತಿ ಪತ್ನಿಯ ನಿಜ ಬಣ್ಣವನ್ನು ಪೊಲೀಸ್ರು ಬಟಾಬಯಲು ಮಾಡಿದ್ದಾರೆ. ತನ್ನ ರಂಗಿನಾಟಕ್ಕೆ ಪತಿ ಅಡ್ಡ ಬರ್ತಾನೆ ಎಂದು ತಿಳಿದ ಪತ್ನಿ ವಾಮಾಚಾರದ ಹೆಸರಲ್ಲಿ ಪತಿಕೊಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾಳೆ. ಅಂದ ಹಾಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಲ್ಕುಂಡಿ ಗ್ರಾಮದ ಸುಮಾರು 47 ವರ್ಷದ ಸದಾಶಿವ ಕೊಲೆಯಾಗಿದ್ದು, ಇದೇ ಸದಾಶಿವನ ಪತ್ನಿ ರಾಜೇಶ್ವರಿ ಈಕೆಯ ಇಬ್ಬರು ಪ್ರಿಯಕರರಾದ ರಂಗಸ್ವಾಮಿ, ಶಿವಯ್ಯ ಬಂಧಿತ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಹೇಯ ಕೃತ್ಯ: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ವಾಮಾಚಾರದ ನಾಟಕವಾಡಿ ಪತ್ನಿ

ಅಂದಹಾಗೆ ಅಕ್ಟೋಬರ್ 17 ರಂದು ಮಡುವಿನಹಳ್ಳಿ ಸರ್ಕಾರಿ ಶಾಲೆಯ ಪಕ್ಕದ ಗದ್ದೆಯ ಬದುವಿನಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಈ ಸದಾಶಿವ ಪತ್ತೆಯಾಗಿದ್ದ. ನರಳಾಟವಾಡ್ತ ಇದ್ದ ಸದಾಶಿವನನ್ನ ಕಂಡ ಸ್ಥಳಿಯರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ. ಆದ್ರೆ ಈ ಮೃತ ಸದಾಶಿವ ಸಿಕ್ಕ ಜಾಗದಲ್ಲಿ ರಕ್ತಕೊಡಿಯಂತೆ ಹರಿದಿತ್ತು ಪಕ್ಕದಲ್ಲೇ ನೂರ ಒಂದು ರೂಪಾಯಿ, ನಿಂಬೆಹಣ್ಣು, ಎಲೆ ಅಡಿಕೆ ಕುಡಿಕೆ ಬಿದ್ದಿತ್ತು. ಘಟನೆಯನ್ನ ಕಂಡವರು ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಎಲ್ಲರೂ ಆರಂಭದಲ್ಲಿ ಅಂದುಕೊಂಡಿದ್ದರು. ಆದ್ರೆ ಈ ಐನಾತಿ ಪತ್ನಿ ರಾಜೇಶ್ವರಿಯೇ ಪತಿ ಕೊಂದು ವಾಮಾಚಾರದ ನಾಟಕವಾಡಿದ್ದಾಳೆ ಎಂದು ಆರಂಭದಲ್ಲಿ ಯಾರೂ ಕೂಡ ಊಹಿಸಿರಲಿಲ್ಲ.

ಇನ್ನೂ ಕೇಸ್ ದಾಖಲು ಮಾಡಿಕೊಂಡಿದ್ದ ಹುಲ್ಲಹಳ್ಳಿ ಪೊಲೀಸರು ಪ್ರಕರಣದ ಜಾಡು ಹಿಡಿದು ಹೊರಟಾಗ ಪತ್ನಿ ರಾಜೇಶ್ವರಿ ಮೇಲೆ ಗುಮಾನಿಬಂದಿದೆ. ಆಕೆಯ ಮೊಬೈಲ್ ಟ್ರ್ಯಾಕ್ ಮಾಡಿದ್ಮೆಲೆ ಪೊಲೀಸರೇ ಒಮ್ಮೆಲೆ ಶಾಕ್ ಆಗಿದ್ದಾರೆ. ಈ ರಾಜೇಶ್ವರಿ ಹಲವಾರು ಸಿಮ್ ಗಳನ್ನು ಬದಲಾವಣೆ ಮಾಡಿದ್ದು ಪ್ರಿಯಕರರಾದ ಶಿವಯ್ಯ, ರಂಗಸ್ವಾಮಿ ಜೊತೆ ನಿರಂತರವಾಗಿ ಮಾತನಾಡಿದ್ದು ಗೊತ್ತಾಗಿದೆ‌. ಪೊಲೀಸ್ರು ರಾಜೇಶ್ವರಿಯನ್ನ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದಾಗ ನಿಜಬಣ್ಣ ಬಯಲಾಗಿದೆ.

ಒಟ್ಟಿನಲ್ಲಿ ತನ್ನ ಅನೈತಿಕ ಸಂಬಂಧಕ್ಕೆ ಪತಿಯನ್ನು ಈ ಪಾಪಿ ಪತ್ನಿ ಕತ್ತುಸೀಳಿ ಕೊಂದು ನಾಟಕವಾಡಿ ಇದೀಗ ಮಾಡಿದ ಪಾಪಕ್ಕೆ ಜೈಲು ಕಂಬಿಹಿಂದೆ ಬಿದ್ದಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್