AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಟಿ ಔಷಧ ಪಡೆಯಲು ಬಂದ ಮಹಿಳೆಯ ಹತ್ಯೆಗೈದು, ಚಿನ್ನಾಭರಣ ಕದ್ದು ಪರಾರಿ

ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ಚಿನ್ನದ ಸರಕ್ಕಾಗಿ ಮಹಿಳೆಯೋರ್ವರನ್ನು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನಾಟಿ ಔಷಧ ಪಡೆಯಲು ಬಂದ ಮಹಿಳೆಯ ಹತ್ಯೆಗೈದು, ಚಿನ್ನಾಭರಣ ಕದ್ದು ಪರಾರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 21, 2022 | 4:14 PM

Share

ಬೆಂಗಳೂರು: ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ಚಿನ್ನದ ಸರಕ್ಕಾಗಿ ಮಹಿಳೆಯೋರ್ವರನ್ನು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಸಿದ್ದಮ್ಮ (55) ಅವರನ್ನು ಹತ್ಯೆಗೈದು, ಸರ ಕಸಿದು ಸಲೀಂ (50) ಎಂಬಾತ ಪರಾರಿಯಾಗಿದ್ದಾನೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಿದ್ದಮ್ಮ ಆರೋಪಿ ಸಲೀಂ ಬಳಿ ನಾಟಿ ಔಷಧಿ ತೆಗೆದುಕೊಳ್ಳುತ್ತಿದ್ದರು. ಅದೇ ರೀತಿ ನಿನ್ನೆ ಕೂಡ ಆರೋಪಿ ಮನೆಗೆ ಹೋಗಿದ್ದಾರೆ. ಈ ವೇಳೆ ಸಲೀಂ ಕೊಲೆ ಮಾಡಿ ಚಿನ್ನದ ಸರ ಕದ್ದು‌ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಹಿನ್ನೆಲೆ: ಬಿಹಾರ ಮೂಲದ ಸಲೀಂ 20 ವರ್ಷದಿಂದ ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ವಾಸವಿದ್ದ. ಊರಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಆರೋಪಿ, ಐದಾರು ವರ್ಷದಿಂದ ಶುಗರ್ ಖಾಯಿಲೆಗೆ ನಾಟಿ ಔಷಧಿ ಕೊಡುತ್ತಿದ್ದ. ಆದರೆ ಊರಲ್ಲಿದ್ದವರ ಜೊತೆಗೆ ಹೆಚ್ಚು ಒಡನಾಟ ಇರಲಿಲ್ಲ. ಮೃತ ಸಿದ್ದಮ್ಮ ಕೂಡ ಸಲೀಂ ಬಳಿ ನಾಟಿ ಔಷಧಿ ಪಡೆಯುತ್ತಿದ್ದರು. ಹಾಗೆಯೇ ನಿನ್ನೆ ಕೂಡ ಸಲೀಂ ಇದ್ದ ಮನೆಗೆ ನಾಟಿ ಔಷಧಿ ಪಡೆಯಲು ಬಂದಿದ್ದರು.

ಸಲೀಂ ಪತ್ನಿ ಜೊತೆಗೆ ಕಟ್ಟಿಗೇನಹಳ್ಳಿಯಲ್ಲಿ ವಾಸವಿದ್ದ. ನಿನ್ನೆ ಸಿದ್ದಮ್ಮ ಬರುವ ವೇಳೆಗೆ ಸಲೀಂ‌ ಪತ್ನಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆ ಕತ್ತಲ್ಲಿದ್ದ ಚಿನ್ನದ ಸರ, ಓಲೆ, ಕಾಲು ಚೈನು ಕಳ್ಳತನ ಮಾಡಲಾಗಿದೆ. ಪ್ರಕರಣದ ಕುರಿತು ಮತ್ತಷ್ಟು ಅನುಮಾನಗಳಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ರಾಯಚೂರು: ಕುಡಿತದ ಚಟಕ್ಕಾಗಿ ಮನೆ ಮಾರಲು ಯತ್ನಿಸುತ್ತಿದ್ದ ಮಗನನ್ನು ಹತ್ಯೆಗೈದ ತಾಯಿ ರಾಯಚೂರು: ಸಿರವಾರ ಪಟ್ಟಣದಲ್ಲಿ ಇಸ್ಪೀಟ್, ಕುಡಿತದ ಚಟಕ್ಕಾಗಿ ಮನೆ ಮಾರಲು ಯತ್ನಿಸುತ್ತಿದ್ದ ಹಿನ್ನೆಲೆಯಲ್ಲಿ ಮಗಳು, ಸೋದರಳಿಯನ ಜೊತೆ ಸೇರಿ ತಾಯಿಯೋರ್ವರು ಮಗನನ್ನು ಹತ್ಯೆಗೈದಿದ್ದಾರೆ. ಕೊಡಲಿಯಿಂದ ಹೊಡೆದು ಹಗ್ಗದಿಂದ ಕುತ್ತಿಗೆಗೆ ಬಿಗಿದು ಅಮರೀಶ್(43)ನನ್ನ ಕುಟುಂಬಸ್ಥರು ಹತ್ಯೆಗೈದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿದ್ದರ ಬಗ್ಗೆ ಅನುಮಾನ ಬಾರದಂತೆ ಆರೋಪಿಗಳು ವರ್ತಿಸಿದ್ದರು. ಸ್ಥಳೀಯರ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಪುಷ್ಪ ಸಿನಿಮಾದಿಂದ ಸ್ಫೂರ್ತಿ ಪಡೆದು ಅಪ್ರಾಪ್ತರಿಂದ ಕೊಲೆ; ಫೇಮಸ್​ ಆಗಲೆಂದು ಹತ್ಯೆಯ ವಿಡಿಯೋ ಅಪ್​ಲೋಡ್ ಮಾಡಲು ಪ್ಲಾನ್!

ಮಂಗಳಮುಖಿ ಕೊಲೆ ಪ್ರಕರಣ; 3 ವರ್ಷ ಕಳೆದರೂ ಪತ್ತೆಯಾಗದ ಮತ್ತೋರ್ವ ಮಂಗಳಮುಖಿ, ಮರ್ಯಾದಾ ಹತ್ಯೆ ನಡೆದಿರುವ ಶಂಕೆ

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು