ಪುಣೆ: ಹೋಟೆಲ್‌ನಿಂದ ಮೊಟ್ಟೆ ಕದ್ದಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ

ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿದ್ದಕ್ಕೆ ಯುವತಿಯ ಕುಟುಂಬಸ್ಥರು ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಪುಣೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ದೌರ್ಜನ್ಯವೆಸಗಿದ ಪ್ರಕರಣ ವರದಿ ಆಗಿದೆ.

ಪುಣೆ: ಹೋಟೆಲ್‌ನಿಂದ ಮೊಟ್ಟೆ ಕದ್ದಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ
ಪ್ರಾತಿನಿಧಿಕ ಚಿತ್ರ
Follow us
|

Updated on: Dec 18, 2023 | 2:14 PM

ಪುಣೆ, ಡಿಸೆಂಬರ್ 18: ಪುಣೆ (Pune) ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮೊಟ್ಟೆ ಕದ್ದಿದ್ದಾರೆ ಎಂದು ಆರೋಪಿಸಿ ಆಕೆಯನ್ನು ವಿವಸ್ತ್ರಗೊಳಿಸಿದ ಘಟನೆ ವರದಿ ಆಗಿದೆ.  ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್‌ನ ಅಡುಗೆಯವರು ಇದನ್ನು ಮಾಡಿದ್ದಾರೆ. ಆರೋಪಿಯ ಹೆಸರು ಮುಖೇಶ್ ಸಿಂಗ್ ಪುಂಡಿಲ್. ಆತನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪುಣೆಯಂತಹ ಸಾಂಸ್ಕೃತಿಕ ನಗರಿಯಲ್ಲಿ ಮಹಿಳಾ ಉದ್ಯೋಗಿಯೊಂದಿಗೆ ನಡೆದ ಈ ಆಘಾತಕಾರಿ ಘಟನೆಯಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಆ ಉದ್ಯೋಗಿಯ ವಿರುದ್ಧ ಹೋಟೆಲ್ ಆಡಳಿತ ಏನು ಕ್ರಮ ಕೈಗೊಂಡಿದೆ? ಈ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಟಿವಿ9 ಮರಾಠಿ ವರದಿ ಮಾಡಿದೆ. ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿದ್ದಕ್ಕೆ ಯುವತಿಯ ಕುಟುಂಬಸ್ಥರು ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆಯ ಬೆನ್ನಲ್ಲೇ ಪುಣೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ವರದಿ ಆಗಿದೆ.

ಆರೋಪಿ ವಿರುದ್ಧ ಪ್ರಕರಣ ದಾಖಲು

ಆರೋಪಿ ಮುಖೇಶ್ ಸಿಂಗ್ ಪುಂಡಿಲ್ ಪುಣೆಯ ಹೋಟೆಲ್ ಪಾರ್ಕ್ ಆರ್ನೇಟ್ ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದಾನೆ. ಸಂತ್ರಸ್ತೆ 50 ವರ್ಷದ ಮಹಿಳೆ ಈ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ನೀವು ಮೊಟ್ಟೆ ಕದ್ದಿದ್ದೀರಿ ಎಂದು ಅಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೇಲೆ ಮುಖೇಶ್ ಸಿಂಗ್ ಆರೋಪಿಸಿದ್ದಾರೆ. ನೀವು ಮೊಟ್ಟೆ ಅಡಗಿಸಿಟ್ಟಿದ್ದೀರಿ ಇದರಿಂದ ಹುಡುಕಾಟ ನಡೆಸಬೇಕಾಗುತ್ತದೆ ಎಂದು ಸಿಂಗ್ ಮಹಿಳೆಯ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾನೆ.

ಇದನ್ನೂ ಓದಿ: ಹಲ್ಲೆ ನಡೆಸುವಾಗ ಮೂಕಪ್ರೇಕ್ಷಕರಾಗಿದ್ದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ: ಹೈಕೋರ್ಟ್ ಸಲಹೆ

ಆರೋಪಿ ಮುಖೇಶ್ ಸಿಂಗ್ ಅಲ್ಲಿಗೆ ನಿಲ್ಲದೆ ಮಹಿಳೆಯ ರಸ್ತೆ ತಡೆದು ಆಕೆಯನ್ನು ಬೈದಿದ್ದಾನೆ. ಮಹಿಳೆಗೆ ಕಿರುಕುಳ ನೀಡಲಾಯಿತು. ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್‌ನ ಅಡುಗೆಯವರು ಮಾಡಿದ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.. ಈ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಯರವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’