AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್

ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ನುಗ್ಗಿ ದರೋಡೆ ಮಾಡಿದ್ದರು. ಸದ್ಯ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 17, 2024 | 8:40 AM

Share

ಬೆಂಗಳೂರು, ಜ.17: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ರಾಬರಿ (Robbery) ಮಾಡಿದ್ದ ಖತರ್ನಾಕ್ ಗ್ಯಾಂಗನ್ನು ಕೊಡಿಗೆಹಳ್ಳಿ ಪೊಲೀಸರು (Kodigehalli Police) ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತರು. ಆರೋಪಿಗಳಾದ ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿ. ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿ ಕೆಮಿಕಲ್ ಇದ್ದ ಕರ್ಚಿಫ್ ಮುಖಕ್ಕೆ ಇಟ್ಟು ಬಳಿಕ ಕೈ-ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದರು. ಸದ್ಯ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಳು. ಅನುಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು. ಘಟನೆ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:  ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

ಆರೋಪಿಗಳು ಆಯುರ್ವೇದಿಕ್​ಗೆ ಸೆಂಟರ್​ಗೆ ಮಸಾಜ್ ಥೆರಪಿಗೆಂದು ಬಂದು ದರೋಡೆ ಮಾಡಿದ್ದರು. ಅಲ್ಲದೆ ಆರೋಪಿಗಳು ಆಯುರ್ವೇದಿಕ್ ಮಸಾಜ್ ಮಾಡಿಸೋ ಮಾಹಿತಿ ಕೇಳಲು ಹಿಂದಿನ ದಿನವೇ ಬಂದು ದರೋಡೆಗೆ ಪ್ಲಾನ್ ಮಾಡಿ ಹೋಗಿದ್ದರು. ರೇಣುಕಾ ಮತ್ತು ಅವಳ ಗಂಡ ಗುರು ಪ್ಲಾನ್ ಮಾಡಿ ದರೋಡೆಗೆ ಸ್ಕೆಚ್ ಹಾಕಿದ್ರು. ಥೆರಫಿಸ್ಟ್ ಒಬ್ಬಳೇ ಇದ್ದಾಗ ದರೋಡೆ ಮಾಡಲು ಬೆಳಗ್ಗೆ 8:30ರ ಸುಮಾರಿಗೆ ಈ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು. ಎರಡು ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಗುರು, ಪ್ರಭಾವತಿ, ರುದ್ರೇಶ್, ಸಂದೀಪ್ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ ಬಳಿ ಗಾಡಿ ನಿಲ್ಲಿಸಿದರು. ಬಳಿಕ ಥೆರಫಿಸ್ಟ್ ಅನುಶ್ರೀ ಒಬ್ಬರೇ ಇದ್ದದನ್ನು ಗಮನಿಸಿ ಒಳಗೆ ಬಂದು ದರದ ಬಗ್ಗೆ ಚರ್ಚಿಸಿದ್ದಾರೆ.

ಇನ್ನು ದರೋಡೆ ಮಾಡಲು ಬಂದಾಗ ಗುರು ಜೊತೆಗೆ ಪತ್ನಿ ರೇಣುಕಾ ಬಂದಿರಲಿಲ್ಲ. ಪ್ರಭಾವತಿ ಮಸಾಜ್ ಬಗ್ಗೆ ಮಾಹಿತಿ ಪಡೆದು ನನ್ನ ಗಂಡ ಬಂದು ಹಣ ನೀಡ್ತಾರೆ ಎಂದು ಗುರುನನ್ನ ಒಳಗೆ ಕರೆಸಿಕೊಂಡಿದ್ಲು. ಒಳಗೆ ಬಂದ ಗುರು ಅನ್ಲೈನ್ ಪೇಮೆಂಟ್ ಮಾಡೋದಾಗಿ ಹೇಳಿದ. ಜೇಬಿನಿಂದ ಮೊಬೈಲ್ ಎತ್ತುವಂತೆ ಮಾಡಿ ತಕ್ಷಣ ಕೆಮಿಕಲ್ ಇದ್ದ ಕರ್ಚಿಫ್ ಅನ್ನು ಅನುಶ್ರೀ ಮುಖಕ್ಕೆ ಇಟ್ಟು ಆಕೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.

ಅನುಶ್ರೀ ಮೈ ಮೇಲಿದ್ದ ಚಿನ್ನದ ಸರ ದೋಚಿದ್ದಾರೆ. ಕೋಡಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ಐವರನ್ನ ಬಂಧಿಸಿದ್ದಾರೆ. ಆರೋಪಿಗಳನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅನುಶ್ರೀ ಮತ್ತು ರೇಣುಕಾ ಇಬ್ಬರು ಪರಿಚಯಸ್ಥರೇ ಅನ್ನೋದು ಬಯಲಾಗಿದೆ. ರೇಣುಕಾ ಕೂಡ ಥೆರಪಿಸ್ಟ್ ಆಗಿ ಕೆಲಸ ಮಾಡಿಕೊಂಡಿದ್ದಳು. ಹಣಕ್ಕಾಗಿ ಅನುಶ್ರೀ ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದು ಬಯಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?