AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್

ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ನುಗ್ಗಿ ದರೋಡೆ ಮಾಡಿದ್ದರು. ಸದ್ಯ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್
ಪ್ರಾತಿನಿಧಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Jan 17, 2024 | 8:40 AM

Share

ಬೆಂಗಳೂರು, ಜ.17: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ರಾಬರಿ (Robbery) ಮಾಡಿದ್ದ ಖತರ್ನಾಕ್ ಗ್ಯಾಂಗನ್ನು ಕೊಡಿಗೆಹಳ್ಳಿ ಪೊಲೀಸರು (Kodigehalli Police) ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ ಬಂಧಿತರು. ಆರೋಪಿಗಳಾದ ಗುರು ಮತ್ತು ರೇಣುಕಾ ಇಬ್ಬರು ಪತಿ-ಪತ್ನಿ. ರೇಣುಕಾ ಹಣದ ಆಸೆಗೆ ಬಿದ್ದು ತನ್ನ ಸ್ನೇಹಿತೆ ಬಳಿಯೇ ಹಣ ದೋಚಲು ಸಂಚು ರೂಪಿಸಿ ಕೆಮಿಕಲ್ ಇದ್ದ ಕರ್ಚಿಫ್ ಮುಖಕ್ಕೆ ಇಟ್ಟು ಬಳಿಕ ಕೈ-ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದರು. ಸದ್ಯ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಮಾಡಿದ್ದ ಸಾಲ ತೀರಿಸಲು ಅಡ್ಡದಾರಿ ಹಿಡಿದಿದ್ದ ಪ್ರಭಾವತಿ ಎಂಬ ಮಹಿಳೆ ತನ್ನ ಗ್ಯಾಂಗ್​ನೊಂದಿಗೆ ಜನವರಿ‌ 14ರ ಬೆಳಗ್ಗೆ 9.20 ಗಂಟೆ ಸುಮಾರಿಗೆ ಕೊಡಿಗೆಹಳ್ಳಿ ಸಮೀಪದ ತಿಂಡ್ಲು ಸರ್ಕಲ್​ನಲ್ಲಿ ಇರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್​ಗೆ ನುಗ್ಗಿ ಅಟ್ಟಹಾಸ ಮೆರೆದಿದ್ದಳು. ಅನುಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಮಾಂಗಲ್ಯ ಸರ ಸೇರಿದಂತೆ ಚಿನ್ನಾಭರಣ ಕಸಿದು ಪರಾರಿಯಾಗಿದ್ದರು. ಘಟನೆ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:  ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

ಆರೋಪಿಗಳು ಆಯುರ್ವೇದಿಕ್​ಗೆ ಸೆಂಟರ್​ಗೆ ಮಸಾಜ್ ಥೆರಪಿಗೆಂದು ಬಂದು ದರೋಡೆ ಮಾಡಿದ್ದರು. ಅಲ್ಲದೆ ಆರೋಪಿಗಳು ಆಯುರ್ವೇದಿಕ್ ಮಸಾಜ್ ಮಾಡಿಸೋ ಮಾಹಿತಿ ಕೇಳಲು ಹಿಂದಿನ ದಿನವೇ ಬಂದು ದರೋಡೆಗೆ ಪ್ಲಾನ್ ಮಾಡಿ ಹೋಗಿದ್ದರು. ರೇಣುಕಾ ಮತ್ತು ಅವಳ ಗಂಡ ಗುರು ಪ್ಲಾನ್ ಮಾಡಿ ದರೋಡೆಗೆ ಸ್ಕೆಚ್ ಹಾಕಿದ್ರು. ಥೆರಫಿಸ್ಟ್ ಒಬ್ಬಳೇ ಇದ್ದಾಗ ದರೋಡೆ ಮಾಡಲು ಬೆಳಗ್ಗೆ 8:30ರ ಸುಮಾರಿಗೆ ಈ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು. ಎರಡು ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಗುರು, ಪ್ರಭಾವತಿ, ರುದ್ರೇಶ್, ಸಂದೀಪ್ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್ ಬಳಿ ಗಾಡಿ ನಿಲ್ಲಿಸಿದರು. ಬಳಿಕ ಥೆರಫಿಸ್ಟ್ ಅನುಶ್ರೀ ಒಬ್ಬರೇ ಇದ್ದದನ್ನು ಗಮನಿಸಿ ಒಳಗೆ ಬಂದು ದರದ ಬಗ್ಗೆ ಚರ್ಚಿಸಿದ್ದಾರೆ.

ಇನ್ನು ದರೋಡೆ ಮಾಡಲು ಬಂದಾಗ ಗುರು ಜೊತೆಗೆ ಪತ್ನಿ ರೇಣುಕಾ ಬಂದಿರಲಿಲ್ಲ. ಪ್ರಭಾವತಿ ಮಸಾಜ್ ಬಗ್ಗೆ ಮಾಹಿತಿ ಪಡೆದು ನನ್ನ ಗಂಡ ಬಂದು ಹಣ ನೀಡ್ತಾರೆ ಎಂದು ಗುರುನನ್ನ ಒಳಗೆ ಕರೆಸಿಕೊಂಡಿದ್ಲು. ಒಳಗೆ ಬಂದ ಗುರು ಅನ್ಲೈನ್ ಪೇಮೆಂಟ್ ಮಾಡೋದಾಗಿ ಹೇಳಿದ. ಜೇಬಿನಿಂದ ಮೊಬೈಲ್ ಎತ್ತುವಂತೆ ಮಾಡಿ ತಕ್ಷಣ ಕೆಮಿಕಲ್ ಇದ್ದ ಕರ್ಚಿಫ್ ಅನ್ನು ಅನುಶ್ರೀ ಮುಖಕ್ಕೆ ಇಟ್ಟು ಆಕೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ.

ಅನುಶ್ರೀ ಮೈ ಮೇಲಿದ್ದ ಚಿನ್ನದ ಸರ ದೋಚಿದ್ದಾರೆ. ಕೋಡಿಗೆಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ಐವರನ್ನ ಬಂಧಿಸಿದ್ದಾರೆ. ಆರೋಪಿಗಳನ್ನ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಅನುಶ್ರೀ ಮತ್ತು ರೇಣುಕಾ ಇಬ್ಬರು ಪರಿಚಯಸ್ಥರೇ ಅನ್ನೋದು ಬಯಲಾಗಿದೆ. ರೇಣುಕಾ ಕೂಡ ಥೆರಪಿಸ್ಟ್ ಆಗಿ ಕೆಲಸ ಮಾಡಿಕೊಂಡಿದ್ದಳು. ಹಣಕ್ಕಾಗಿ ಅನುಶ್ರೀ ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದು ಬಯಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ