ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?

ಅಲ್ಲಿ ಎಂದಿನಂತೆ ಜಮೀನಿಗೆ ತೆರಳಿದ ರೈತರಿಗೆ ಶಾಕ್ ಕಾದಿದ್ದು, ಮೆಕ್ಕೆಜೋಳದ ಜಮೀನಿನ ಮದ್ಯದಲ್ಲಿ ಮಹಿಳೆಯ ಶವ ಪತ್ತೆ ಆಗಿತ್ತು. ಇದೀಗ ಆ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೇ ಕೊಲೆ ಮಾಡಿದ್ದಾನೆಂಬ ಗಂಭೀರ ಆರೋಪ ಕೂಡ ಕೇಳಿಬಂದಿದೆ. 

ಹೊಲದಲ್ಲಿ ಪತ್ತೆಯಾಯ್ತು ಮಹಿಳೆ ಶವ; ಅನೈತಿಕ ಸಂಬಂಧ ಹೊಂದಿದ್ದವನೇ ಮಾಡಿದನಾ ಕೊಲೆ?
ಮೃತ ಮಹಿಳೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 11, 2023 | 7:50 PM

ಚಿತ್ರದುರ್ಗ, ಅ.11: ಮೆಕ್ಕೆಜೋಳದ ಜಮೀನಿನ ಮದ್ಯ ಭಾಗದಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಭೀಕರ ಕೊಲೆ ಕಂಡು ಸಂಬಂಧಿಕರು, ಗ್ರಾಮಸ್ಥರು ಶಾಕ್​ಗೆ ಒಳಗಾಗಿದ್ದಾರೆ. ಇನ್ನು ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು, ಚಿತ್ರದುರ್ಗ(Chitradurga) ತಾಲೂಕಿನ ಮಹಾದೇವನಕಟ್ಟೆ ಗ್ರಾಮದ ಹೊರವಲಯದಲ್ಲಿರುವ ಮೆಕ್ಕೆಜೋಳದ ಜಮೀನಿನಲ್ಲಿ ಇದೇ ಗ್ರಾಮದ ಭಾಗ್ಯಮ್ಮ(43)ಳ ಶವ ಪತ್ತೆ ಆಗಿತ್ತು. ಎರಡು ದಿನದ ಹಿಂದೆಯೇ ಕೊಲೆ ಮಾಡಿ ಬಿಸಾಡಿದ ಸ್ಥಿತಿಯಲ್ಲಿ ಶವ ಕಂಡು ಬಂದಿದ್ದು, ಕೂಟಲೇ ಸ್ಥಳೀಯರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದಾಗ ಮಹಾದೇವನಕಟ್ಟೆಯ ಭಾಗ್ಯಮ್ಮಳ ಶವ ಎಂಬುದು ಪತ್ತೆ ಆಗಿದೆ.

ಇನ್ನು ಘಟನೆ ಕುರಿತು ಮೃತ ಭಾಗ್ಯಮ್ಮಳ ತಾಯಿ ಪಾರ್ವತಮ್ಮ ಅವರು ಮಾತನಾಡಿ ‘ಈ ಹಿಂದೆ ಭಾಗ್ಯಮ್ಮ ಓರ್ವನ ಜೊತೆ ಪ್ರೀತಿಸಿ ಓಡಿ ಹೋಗಿದ್ದಳು. ಬಳಿಕ ವಾಪಸ್ ಕರೆದುಕೊಂಡು ಬಂದು, ವರನನ್ನು ಹುಡುಕಿ ಮದುವೆ ಮಾಡಿದ್ದೆವು. ಆಕೆಗೆ ಓರ್ವ ಮಗಳು ಸಹ ಜನಿಸಿದ್ದು, ಆಕೆಯನ್ನು ಪಿಯುಸಿವರೆಗೆ ನಾನೇ ಓದಿಸಿ, ಮದುವೆ ಮಾಡಿಕೊಟ್ಟಿದ್ದೇವೆ. ಆದ್ರೆ, ಭಾಗ್ಯಮ್ಮ ಕಟ್ಟಿಕೊಂಡ ಪತಿಯ ಬಿಟ್ಟು ಬೇರೆಯವರ ಜತೆ ಅನೈತಿಕ ಸಂಬಂಧವಿರಿಸಿಕೊಂಡಿದ್ದಳು. ನನ್ನನ್ನೂ ಏಕಾಂಗಿಯಾಗಿ ಬಿಟ್ಟು ತಾನೊಬ್ಬಳೇ ಹಿಂದಿನ ಮನೆಯಲ್ಲಿ ವಾಸವಾಗಿದ್ದಳು.

ಇದನ್ನೂ ಓದಿ:ಬೆಳಗಾವಿಯಲ್ಲಿ ಭೀಕರ ಕೊಲೆ; ಪತ್ನಿ, ಆಕೆಯ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಆರೋಪಿ ಪರಾರಿ

ಕಳೆದ ನಾಲ್ಕು ವರ್ಷದಿಂದ ಇದೇ ಗ್ರಾಮದ ಮಲ್ಲಿಕಾರ್ಜುನ(35) ಎಂಬ ಯುವಕನ ಜೊತೆ ಅಕ್ರಮ ಸಂಬಂದ ಹೊಂದಿದ್ದಳು. ಕೆಲ ದಿನಗಳಿಂದ ನಿತ್ಯ ಜಗಳ, ಪಂಚಾಯತಿ ನಡೆಯುತ್ತಿತ್ತು. ಭಾಗ್ಯಮ್ಮಳ ಬಳಿ ಜಮೀನು ಮಾರಾಟ ಮಾಡಿದ್ದ 2 ಲಕ್ಷ ರೂಪಾಯಿ ಹಣ ಇತ್ತು. ಹೀಗಾಗಿ, ಮಲ್ಲಿಕಾರ್ಜುನನೇ ನನ್ನ ಮಗಳನ್ನು ತನ್ನ ಜಮೀನಿಗೆ ಕರೆಸಿಕೊಂಡು ಹತ್ಯೆ ಮಾಡಿ ಪಕ್ಕದ ಮೆಕ್ಕೆಜೋಳದ ಜಮೀನಿಗೆ ಹಾಕಿದ್ದಾನೆ. ಭಾಗ್ಯಮ್ಮ ಮತ್ತು ಮಲ್ಲಿಕಾರ್ಜುನ ನಡುವೆ ಕೆಲ ತಿಂಗಳಿಂದ ಅನೇಕ ಸಲ ಗಲಾಟೆ ನಡೆಯುತ್ತಿತ್ತು. ತಿಳಿ ಹೇಳಲು ಹೋದರೆ ನನ್ನ ಜೊತೆಯೂ ಸಹ ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲು ಹೋದರೆ ಪೊಲೀಸರು ಕೇರ್ ಮಾಡಲಿಲ್ಲ. ಪೊಲೀಸರು ಗಮನಹರಿಸಿದ್ದರೆ ಮಗಳ ಜೀವ ಉಳಿಯಿತ್ತಿತ್ತು ಎಂದು ಪಾರ್ವತಮ್ಮ ಆರೋಪಿಸಿದ್ದಾರೆ.

ಇನ್ನು ಭಾಗ್ಯಮ್ಮಳ ಸಹೋದರರಿಬ್ಬರು ಭಾಗ್ಯಮ್ಮಳಿಂದ ದೂರಾಗಿ ವರ್ಷಗಳೇ ಉಳಿದಿವೆ. ಯಾರ ಮಾತು ಕೇಳದೆ
ತನ್ನಿಚ್ಛೆಯಂತೆ ಬದುಕುತ್ತಿದ್ದ ಭಾಗ್ಯಮ್ಮ, ಸಂಬಂಧಿಕರಿಂದಲೂ ದೂರಾಗಿ ಒಂಟಿಯಾಗಿ ಬದುಕುತ್ತಿದ್ದಳು. ಭಾಗ್ಯಮ್ಮ
ಕೊಲೆಯಾದ ವಿಚಾರ ತಿಳಿದ ಸಹೋದರರು ಸದ್ಯ ಕೊಲೆ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಗ್ರಾಮಾಂತರ
ಠಾಣೆಗೆ ದೂರು ನೀಡಿದ್ದಾರೆ. ಒಟ್ಟಾರೆಯಾಗಿ ಚಿತ್ರದುರ್ಗದ ಮಹಾದೇವನಕಟ್ಟೆ ಗ್ರಾಮದಲ್ಲಿ ಮಹಿಳೆಯ ಬರ್ಬರ ಹತ್ಯೆ ನಡೆದಿದೆ. ಸದ್ಯ ಆರೋಪಿ ಮಲ್ಲಿಕಾರ್ಜುನ ನಾಪತ್ತೆ ಆಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇನ್ನಾದ್ರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Wed, 11 October 23

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us