AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakur News: ಅಯ್ಯೋ ವಿಧಿಯೇ! ಮೊಬೈಲ್ ಚಾರ್ಜರ್​ ಕೊಡಲಿಲ್ಲವೆಂದು ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾ…!

ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ.

Tumakur News: ಅಯ್ಯೋ ವಿಧಿಯೇ! ಮೊಬೈಲ್ ಚಾರ್ಜರ್​ ಕೊಡಲಿಲ್ಲವೆಂದು ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾ...!
ಮೃತ ವಿದ್ಯಾರ್ಥಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 01, 2023 | 10:49 AM

Share

ತುಮಕೂರು, ಆ.1: ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು(Tumakuru)ಜಿಲ್ಲೆಯ ಪಾವಗಡ (Pavagada) ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಇತ ಪಾವಗಡ ಪಟ್ಟಣದ ಶಾಂತಿ ಎಸ್ಎಸ್​ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಭಾನುವಾರ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದ ನಿಖಿಲ್. ಈ ವೇಳೆ ತಾಯಿಯೊಂದಿಗೆ ನನಗೆ ಅದು ಕೊಡಿಸಿಲ್ಲ, ಇದು ಕೊಡಿಸಿಲ್ಲವೆಂದು ಗಲಾಟೆ ಮಾಡುತ್ತಿದ್ದನಂತೆ.

ಗಲಾಟೆ ಬಳಿಕ ತಾಯಿಯ ಬಳಿ ನನಗೆ ಮೊಬೈಲ್ ಚಾರ್ಜರ್ ಕೊಡು ಎಂದಿದ್ದಾನೆ. ಆಗ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ, ತಾಯಿ ಲಕ್ಷ್ಮಮ್ಮ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. ವಾಪಾಸ್ ಮನೆಗೆ ಬಂದು ಬಾಗಿಲು ಬಡಿದಾಗ ಒಳಗಿದ್ದ ನಿಖಿಲ್ ಗೌಡ ಬಾಗಿಲು ತೆಗೆದಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬಯಲಿಗೆ ಬಂದಿದೆ.

ಎಂಟು ವರ್ಷದ ಹಿಂದೆಯೇ ಸಾವನ್ನಪ್ಪಿದ್ದ ಮೃತ ನಿಖಿಲ್ ಗೌಡ ತಂದೆ

ಇನ್ನು ಕಳೆದ ಎಂಟು ವರ್ಷದ ಹಿಂದೆ ಮೃತ ನಿಖಿಲ್​ ಗೌಡನ ತಂದೆಯವರು ಸಾವನ್ನಪ್ಪಿದ್ದರು. ಸದ್ಯ ತಾಯಿ ವರಲಕ್ಷ್ಮಮ್ಮ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಾ, ತನ್ನ ಮಗನ ವಿದ್ಯಾಭ್ಯಾಸದ ಜೊತೆಗೆ ಕುಟುಂಬ ನಿರ್ವಹಿಸುತ್ತಿದ್ದರು. ಇನ್ನು ಇವರಿಗೆ ಮತ್ತೋರ್ವ ಪುತ್ರಿಯಿದ್ದು, ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೀಗ ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಮದುವೆಯಾಗಿ ಎರಡು ವರ್ಷವಾದರೂ ಮಗುವಿಲ್ಲವೆಂಬ ನೋವು; ನವವಿವಾಹಿತೆ ನೇಣಿಗೆ ಶರಣು

ಬೈಕ್ ಅಡ್ಡಗಟ್ಟಿ 24 ವರ್ಷದ ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು ನಗರ: ಜಿಲ್ಲೆಯ ಆನೇಕಲ್​ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಯುವಕನೊರ್ವನಿಗೆ ಅಡ್ಡಗಟ್ಟಿ ಚಾಕು ಇರಿದ ಘಟನೆ ನಡೆದಿದೆ. ಹೇಮಂತ್(24) ಮೃತ ರ್ದುದೈವಿ. ಅತ್ತಿಬೆಲೆಯ ಹಾರ್ಡ್‌ವೇರ್ ಶಾಪ್​​ನಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಬೈಕ್​ನಲ್ಲಿ ಹೋಗುವಾಗ ಈ ದುರ್ಘಟನೆ ನಡೆದಿದೆ. ಇನ್ನು ಚಾಕು ಇರಿತಕ್ಕೊಳಗಾದ ಯುವಕ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಹೇಮಂತ್​ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನೇಕಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದ ಹಂತಕರು

ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಕನಮನಹಳ್ಳಿಯಿಂದ ಮೆಣಸಿಗನಹಳ್ಳಿ ಮಾರ್ಗವಾಗಿ ಬರುವಾಗ ದುಷ್ಕರ್ಮಿಗಳು ಸ್ವಿಫ್ಟ್​ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಟ್ಯಾಕ್ ಮಾಡಿದ್ದರು. ಆತನ ದೇಹದ ಹತ್ತಕ್ಕೂ ಹೆಚ್ಚು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಬಳಿ ಮಾಹಿತಿ ಕಲೆಹಾಕುತ್ತಿದ್ದು, ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 1 August 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!