AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಈಕೆ ಯುವಕನೊಬ್ಬನನ್ನು ಮದುವೆಯಾಗಿ ವಿಚ್ಚೇದನ ಪಡೆದಿದ್ದಳು. ಬಳಿಕ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲಾರಂಭಿಸಿದಳು. ಗಂಡ ಹೆಂಡತಿ ಎಂದು ಹೇಳಿ ಬಾಡಿಗೆ ರೂಮ್ ಪಡೆದಿದ್ದರು. ಈ ನಡುವೆ ಆಕೆ ಮತ್ತೊಬ್ಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ಪ್ರಿಯಕರನಿಗೆ ತಿಳಿದುಬಂದಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ
ಅನ್ಬರಾಸನ್ ಜೊತೆ ವಿದ್ಯಾ (ಎಡಚಿತ್ರ) ಮತ್ತು ಸಂತೋಷ್ ಜೊತೆ ವಿದ್ಯಾ (ಬಲ ಚಿತ್ರ)
TV9 Web
| Edited By: |

Updated on: Feb 08, 2024 | 2:18 PM

Share

ಆನೇಕಲ್, ಫೆ.8: ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ದಿವ್ಯಾ ಎಂಬಾಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಳು. ಗಂಡ ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆ ಪಡೆದು ಕಳೆದ ಆರು ತಿಂಗಳಿನಿಂದ ಲೀವ್​ ಇನ್ ರಿಲೇಷನ್​ನಲ್ಲಿದ್ದರು.

ಇದನ್ನೂ ಓದಿ: ಹಸಿವು ಮತ್ತು ತಾಯಿ ಕಷ್ಟ ನೋಡಲಾಗದೇ ಮಗ ಆತ್ಮಹತ್ಯೆ: ಕೇಸ್​​​​ಗೆ ಬಿಗ್ ಟ್ವಿಸ್ಟ್ ಕೊಟ್ಟ ನಿಜವಾದ ತಾಯಿ

ವಿದ್ಯಾ ಐಟಿ ಕಂಪನಿ ಉದ್ಯೋಗಿಯಾಗಿದ್ದರೆ, ಅನ್ಬರಾಸನ್ ಫ್ಲಿಪ್ ಕಾರ್ಟ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಅನ್ಬರಾಸನ್ ಜೊತೆ ಪ್ರೀತಿಯಲ್ಲಿ ಇರುವಾಗಲೇ ವಿದ್ಯಾಗೆ ಸಂತೋಷ್ ಎಂಬ ಯುವಕನ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾಳೆ. ಈ ವಿಚಾರ ಅನ್ವರಸನ್​ಗೆ ತಿಳಿದಿದೆ. ಅಲ್ಲದೆ, ಮನೆಯಲ್ಲಿ ಸಂತೋಷ್ ಹಾಗೂ ವಿದ್ಯಾ ಜೊತೆಯಲ್ಲಿದ್ದಾಗ ಅನ್ಬರಾಸನ್ ಕಣ್ಣಾರೆ ಕಂಡಿದ್ದನು.

ಈ ವಿಚಾರ ತಿಳಿದು ವಿದ್ಯಾಗೆ ಬುದ್ಧಿ ಹೇಳಿದರೂ ಅಕೆ ಕೆಳಿರಲಿಲ್ಲ. ಇದರಿಂದ ಮನನೊಂದು ಅನ್ಬರಾಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೋಷಕರು ಮೊದಲು ಯುಡಿಆರ್ ಪ್ರಕರಣ ದಾಖಲಿಸಿದ್ದರು. ನಂತರ ಸ್ನೇಹಿತನ ಜೊತೆ ಅನ್ಬರಸನ್ ಹಾಗೂ ವಿದ್ಯಾ ಮಾತನಾಡಿರುವ ಕಾಲ್ ರೇಕಾರ್ಡ್ ಲಭ್ಯವಾಗಿದೆ. ಅದರ ಅಧಾರದ ಮೇಲೆ ಅತ್ಮಹತ್ಯೆಗೆ ಪ್ರಚೋದನೆ ಎಂದು ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಅದರಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹಾಗೂ ವಿದ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!