AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಕಾ ಉಗಿಯುವುದು, ಕಸ ಎಸೆಯೋ ವಿಷಯಕ್ಕೆ ವೃದ್ದನನ್ನ ಮಚ್ಚಿನಿಂದ ಕೊಂದ ಯುವಕ; ಆಗಿದ್ದೇನು?

ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದ ವೃದ್ದ, ನಂತರ ತಮ್ಮ ಬಳಿಯಿದ್ದ ಸುಮಾರು 10 ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು. ಇಂದು(ಶುಕ್ರವಾರ) ಗುಟ್ಕಾ ಉಗಿಯುವುದು ಹಾಗೂ ಕಸ ಎಸೆಯುವ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಮಚ್ಚಿನಿಂದ ಕೊಂದ ದಾರುಣ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.

ಗುಟ್ಕಾ ಉಗಿಯುವುದು, ಕಸ ಎಸೆಯೋ ವಿಷಯಕ್ಕೆ ವೃದ್ದನನ್ನ ಮಚ್ಚಿನಿಂದ ಕೊಂದ ಯುವಕ; ಆಗಿದ್ದೇನು?
ವೃದ್ದನನ್ನ ಮಚ್ಚಿನಿಂದ ಕೊಂದ ಯುವಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 09, 2024 | 3:48 PM

Share

ಬೆಂಗಳೂರು, ಆ.09: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಲುಲ್ಲಕ ವಿಷಯಕ್ಕೆ ವೃದ್ದನನ್ನೇ ಯುವಕನೊಬ್ಬ ಕೊಂದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ(Madanayakanahalli)ಯಲ್ಲಿ ನಡೆದಿದೆ. ಸಿದ್ದಪ್ಪ(70) ಹತ್ಯೆಯಾದ ವೃದ್ದ. ಇಂದು(ಶುಕ್ರವಾರ) ಬೆಳಿಗ್ಗೆ 9ಗಂಟೆಗೆ ಆರೋಪಿ ತುಮಕೂರು ಜಿಲ್ಲೆಯ ಶಿರಾದ ಪುನೀತ್(24), ಕಸ ತುಂಬಿದ ಕವರ್ ಎಸೆದು, ರಸ್ತೆಯಲ್ಲೇ ಗುಟ್ಕಾ ಉಗಿದು ಹೋಗುತ್ತಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ಸಿದ್ದಪ್ಪ ಯುವಕನಿಗೆ ಬೈದಿದ್ದಾನೆ.

ವೃದ್ದನ ಕುತ್ತಿಗೆ ಕಡಿದು ಬರ್ಬರ ಹತ್ಯೆ; ಆರೋಪಿ ಅಂದರ್​

ಇಷ್ಟಕ್ಕೆ ಕುಪಿತಗೊಂಡ ಯುವಕ, ಸಮೀಪದ ಮನೆಯಿಂದ ಮಚ್ಚು ತಂದು ವೃದ್ದನ ಕುತ್ತಿಗೆಯನ್ನ ಕಡಿದು ಬರ್ಬರ ಹತ್ಯೆ ಮಾಡಿದ್ದಾನೆ. ಕೊಲೆ ಬಳಿಕ ಮನೆಗೆ ತೆರಳಿ ತನ್ನ ತಾಯಿಯ ಜೊತೆ ಚಿಕ್ಕಬಿದರಕಲ್ಲಿನಲ್ಲಿರುವ ತನ್ನ ಅಣ್ಣನ ಮನೆಯಲ್ಲಿ ತಲೆಮರೆಸಿಕೊಳ್ಳುವಾಗ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದೀಗ ಕೊಲೆ ಅರೋಪಿ ಪುನೀತ್​​ನನ್ನು ವಶಕ್ಕೆ ಪಡೆದು ವಿಚಾರಣೆ ಶುರುಮಾಡಿದ್ದಾರೆ.

ಇದನ್ನೂ ಓದಿ:ನೇಹಾ ಕೊಲೆ ಕೇಸ್​​ಗೆ ಬಿಗ್ ಟ್ವಿಸ್ಟ್​: ನನ್ನ ಮಗಳನ್ನ ನಮ್ಮ ಪಕ್ಷದ ಮುಖಂಡರೇ ಹತ್ಯೆ ಮಾಡಿಸಿದ್ದು ಎಂದ ತಂದೆ

10 ರಿಂದ 15 ಮನೆ ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದ ಮೃತ ವೃದ್ದ

ಇನ್ನು ಮೃತ ವೃದ್ದ ಸಿದ್ದಪ್ಪ ಕಳೆದ 10 ವರ್ಷಗಳ ಹಿಂದೆ ಪ್ರತಿಷ್ಠಿತ ಹಿಮಾಲಯ ಡ್ರಗ್ಸ್ ಕಂಪನಿಯಿಂದ ನಿವೃತ್ತಿ ಹೊಂದಿದ್ದರು. ಬಳಿಕ ತಮ್ಮ ಬಳಿಯಿದ್ದ ಸುಮಾರು 10ರಿಂದ 15 ಮನೆಯನ್ನು ಬಾಡಿಗೆ ಕೊಟ್ಟು, ನಿವೃತ್ತಿ ಜೀವನ ಸಾಗಿಸುತ್ತಿದ್ದರು. ಸ್ವಚ್ಚತೆ ವಿಷಯದಲ್ಲಿ ಬಾಡಿಗೆ ಮನೆಯವರ ಜೊತೆ ಸಣ್ಣಪುಟ್ಟ ಗಲಾಟೆ ಬಿಟ್ಟರೆ ಬೇರೆ ಯಾವುದೇ ತಕರಾರು ಇರಲಿಲ್ಲ. ಹೀಗಿರುವಾಗ ಇಂತಹದೊಂದು ದುರ್ಘಟನೆ ನಡೆದು ಹೋಗಿದೆ. ಇನ್ನು ಸ್ಥಳಕ್ಕೆ ಬಂದ ಸೀನ್ ಅಫ್ ಕ್ರೈಂ ಟೀಮ್​ನಿಂದ ತನಿಖಾ ಕಾರ್ಯ ನಡೆಯುತ್ತಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ