AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಅತ್ಯಾಚಾರವೆಸಗಿ, ಮದುವೆ ದಿನ ಆಕೆಯನ್ನು ಅಪಹರಿಸಲು ಯತ್ನಿಸಿದ ಯುವಕ

ಮಧ್ಯಪ್ರದೇಶದಲ್ಲಿ ಯುವಕನೊಬ್ಬ 22 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ, ಆಕೆಯ ವಿಡಿಯೋ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾನೆ. ಆಕೆಗೆ ಬೇರೆಯೊಬ್ಬ ಯುವತಿಯ ಜತೆಗೆ ಮದುವೆಯಾಗುತ್ತಿದ್ದಾಳೆ ಎಂಬ ವಿಷಯ ಕೇಳಿ ಆಕೆಯನ್ನು ಅಪಹರಿಸಲು ಯತ್ನಿಸಿದ್ದಾನೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಯುವತಿ ಮೇಲೆ ಅತ್ಯಾಚಾರವೆಸಗಿ, ಮದುವೆ ದಿನ ಆಕೆಯನ್ನು ಅಪಹರಿಸಲು ಯತ್ನಿಸಿದ ಯುವಕ
ಅಕ್ಷಯ್​ ಪಲ್ಲಮಜಲು​​
|

Updated on: May 31, 2024 | 3:12 PM

Share

ಮಧ್ಯಪ್ರದೇಶ, ಮೇ.31: ಮಧ್ಯಪ್ರದೇಶದ ಅಶೋಕನಗರದಲ್ಲಿ ಒಂದು ಅಮಾನುಷ ಘಟನೆಯೊಂದು ನಡೆದಿದೆ. 22 ವರ್ಷದ ಯುವತಿಯನ್ನು ಮದುವೆಯ ವೇಳೆ ಅಪಹರಿಸುವ ಯತ್ನ ನಡೆದಿದೆ. ಆರೋಪಿ ಕಲು ಅಲಿಯಾಸ್ ಸಲೀಂ ಖಾನ್ ಈ ಹಿಂದೆ ಆಕೆಯನ್ನು ಅತ್ಯಾಚಾರ ಮಾಡಿ, ವಿಡಿಯೋ ಮಾಡಿ ಆಕೆಗೆ ಮಾನಸಿಕ ಹಿಂಸೆ ನೀಡಿದ್ದ, ಇದೀಗ ಆಕೆಗೆ ಬೇರೊಬ್ಬರನ್ನು ಮದುವೆ ಆಗುತ್ತಿದ್ದಾಳೆ ಎಂದು ಯುವತಿ ಮತ್ತು ಆಕೆಯ ಮನೆಯವರ ಮೇಲೆ ಹಲ್ಲೆ ಮಾಡಿದ್ದಾನೆ.

ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆತ ತನ್ನ ಸಹಚರರಾದ ಜೋಧಾ, ಸಮೀರ್ ಮತ್ತು ಶಾರುಖ್ ಜೊತೆಗೆ ಆಕೆಯ ಮನೆಗೆ ನುಗ್ಗಿ, ಹಲ್ಲೆ ಮಾಡಿದ್ದಾರೆ. ಇದನ್ನು ಪ್ರತಿಭಟಿಸಿದ ಆಕೆಗೆ ಅಮಾನುಷವಾಗಿ ಹೊಡೆದಿದ್ದಾರೆ. ತಡೆಯಲು ಬಂದು ಆಕೆಯ ತಂದೆ ಮತ್ತು ತಮ್ಮನ ಕೈಯನ್ನು ಮುರಿದಿದ್ದಾರೆ. ಹಾಗೂ ಯುವತಿಯ ತಾಯಿಗೂ ಅಮಾನುಷವಾಗಿ ಥಳಿಸಿದ್ದಾರೆ. ಕತ್ತಿ ಮತ್ತು ಕಬ್ಬಿಣದ ಸರಳುಗಳನ್ನು ಬೀಸುತ್ತಾ ಯುವತಿಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಬಂದಿದ್ದಾರೆ.

ಯುವತಿಯು ತನ್ನನ್ನೂ ಕಾಪಾಡುವಂತೆ ಕಿರುಚಿದ್ದಾಳೆ. ಈ ವೇಳೆ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಸಲೀಂ ಖಾನ್ ಅವರಿಗೂ ಬೆದರಿಕೆ ಹಾಕಿದ್ದಾನೆ. ಹೆಚ್ಚು ಜನ ಸೇರುವುದನ್ನು ಕಂಡು ಅಲ್ಲಿಂದ ಸಲೀಂ ಖಾನ್ ಮತ್ತು ಆತನ ಸಹಚರರಾದ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳು ಯುವತಿಯ ಮನೆಯವರಿಗೆ ಹಾಗೂ ಆಕೆಯನ್ನು ಮದುವೆ ಆಗುವ ಹುಡುಗನ ಕಡೆಯವರಿಗೂ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಲವರ್​​ ಜೊತೆ ಸೇರಿ ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರೀಜರ್‌ನಲ್ಲಿಟ್ಟಿದ್ದ 16 ರ ಬಾಲಕಿಯ ಬಂಧನ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂಯೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ, ಬುಧವಾರ ತಡರಾತ್ರಿ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ