AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಅತ್ಯಾಚಾರವೆಸಗಿ, ಮದುವೆ ದಿನ ಆಕೆಯನ್ನು ಅಪಹರಿಸಲು ಯತ್ನಿಸಿದ ಯುವಕ

ಮಧ್ಯಪ್ರದೇಶದಲ್ಲಿ ಯುವಕನೊಬ್ಬ 22 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ, ಆಕೆಯ ವಿಡಿಯೋ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾನೆ. ಆಕೆಗೆ ಬೇರೆಯೊಬ್ಬ ಯುವತಿಯ ಜತೆಗೆ ಮದುವೆಯಾಗುತ್ತಿದ್ದಾಳೆ ಎಂಬ ವಿಷಯ ಕೇಳಿ ಆಕೆಯನ್ನು ಅಪಹರಿಸಲು ಯತ್ನಿಸಿದ್ದಾನೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ.

ಯುವತಿ ಮೇಲೆ ಅತ್ಯಾಚಾರವೆಸಗಿ, ಮದುವೆ ದಿನ ಆಕೆಯನ್ನು ಅಪಹರಿಸಲು ಯತ್ನಿಸಿದ ಯುವಕ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 31, 2024 | 3:12 PM

ಮಧ್ಯಪ್ರದೇಶ, ಮೇ.31: ಮಧ್ಯಪ್ರದೇಶದ ಅಶೋಕನಗರದಲ್ಲಿ ಒಂದು ಅಮಾನುಷ ಘಟನೆಯೊಂದು ನಡೆದಿದೆ. 22 ವರ್ಷದ ಯುವತಿಯನ್ನು ಮದುವೆಯ ವೇಳೆ ಅಪಹರಿಸುವ ಯತ್ನ ನಡೆದಿದೆ. ಆರೋಪಿ ಕಲು ಅಲಿಯಾಸ್ ಸಲೀಂ ಖಾನ್ ಈ ಹಿಂದೆ ಆಕೆಯನ್ನು ಅತ್ಯಾಚಾರ ಮಾಡಿ, ವಿಡಿಯೋ ಮಾಡಿ ಆಕೆಗೆ ಮಾನಸಿಕ ಹಿಂಸೆ ನೀಡಿದ್ದ, ಇದೀಗ ಆಕೆಗೆ ಬೇರೊಬ್ಬರನ್ನು ಮದುವೆ ಆಗುತ್ತಿದ್ದಾಳೆ ಎಂದು ಯುವತಿ ಮತ್ತು ಆಕೆಯ ಮನೆಯವರ ಮೇಲೆ ಹಲ್ಲೆ ಮಾಡಿದ್ದಾನೆ.

ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆತ ತನ್ನ ಸಹಚರರಾದ ಜೋಧಾ, ಸಮೀರ್ ಮತ್ತು ಶಾರುಖ್ ಜೊತೆಗೆ ಆಕೆಯ ಮನೆಗೆ ನುಗ್ಗಿ, ಹಲ್ಲೆ ಮಾಡಿದ್ದಾರೆ. ಇದನ್ನು ಪ್ರತಿಭಟಿಸಿದ ಆಕೆಗೆ ಅಮಾನುಷವಾಗಿ ಹೊಡೆದಿದ್ದಾರೆ. ತಡೆಯಲು ಬಂದು ಆಕೆಯ ತಂದೆ ಮತ್ತು ತಮ್ಮನ ಕೈಯನ್ನು ಮುರಿದಿದ್ದಾರೆ. ಹಾಗೂ ಯುವತಿಯ ತಾಯಿಗೂ ಅಮಾನುಷವಾಗಿ ಥಳಿಸಿದ್ದಾರೆ. ಕತ್ತಿ ಮತ್ತು ಕಬ್ಬಿಣದ ಸರಳುಗಳನ್ನು ಬೀಸುತ್ತಾ ಯುವತಿಯನ್ನು ಆಕೆಯ ಮನೆಯಿಂದ ಹೊರಗೆ ಎಳೆದುಕೊಂಡು ಬಂದಿದ್ದಾರೆ.

ಯುವತಿಯು ತನ್ನನ್ನೂ ಕಾಪಾಡುವಂತೆ ಕಿರುಚಿದ್ದಾಳೆ. ಈ ವೇಳೆ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಸಲೀಂ ಖಾನ್ ಅವರಿಗೂ ಬೆದರಿಕೆ ಹಾಕಿದ್ದಾನೆ. ಹೆಚ್ಚು ಜನ ಸೇರುವುದನ್ನು ಕಂಡು ಅಲ್ಲಿಂದ ಸಲೀಂ ಖಾನ್ ಮತ್ತು ಆತನ ಸಹಚರರಾದ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳು ಯುವತಿಯ ಮನೆಯವರಿಗೆ ಹಾಗೂ ಆಕೆಯನ್ನು ಮದುವೆ ಆಗುವ ಹುಡುಗನ ಕಡೆಯವರಿಗೂ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಲವರ್​​ ಜೊತೆ ಸೇರಿ ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರೀಜರ್‌ನಲ್ಲಿಟ್ಟಿದ್ದ 16 ರ ಬಾಲಕಿಯ ಬಂಧನ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂಯೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ, ಬುಧವಾರ ತಡರಾತ್ರಿ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ತಕ್ಷಣ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??