AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಯುವತಿಗೆ ಚುಡಾಯಿಸಿದಕ್ಕೆ ಯುವಕನಿಗೆ ಆರು ಬಾರಿ ಚಾಕು ಇರಿತ

ಯುವತಿಗೆ ಚುಡಾಯಿಸಿದ ಎನ್ನುವ ಕಾರಣಕ್ಕೆ ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಮರಾಜನಗರ: ಯುವತಿಗೆ ಚುಡಾಯಿಸಿದಕ್ಕೆ ಯುವಕನಿಗೆ ಆರು ಬಾರಿ ಚಾಕು ಇರಿತ
ಆರೋಪಿಗಳು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Dec 20, 2023 | 10:00 PM

Share

ಚಾಮರಾಜನಗರ, ಡಿ.20: ಯುವತಿಗೆ ಚುಡಾಯಿಸಿದ ಎನ್ನುವ ಕಾರಣಕ್ಕೆ ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರ(Chamarajanagar) ದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿ ಚಾಕುವಿನಿಂದ ಇರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವತಿಯನ್ನು ರೇಗಿಸುತ್ತಿದ್ದಾನೆಂದು ತಿಳಿದ ಆಕೆಯ ಸ್ನೇಹಿತರಾದ ಅರುಣ್, ಶ್ಯಾಮ್ ಈ ಕೃತ್ಯ ಎಸಗಿದ್ದಾರೆ.

ಇಬ್ಬರು ಆರೋಪಿಗಳ ಬಂಧನ ಮತ್ತೊಬ್ಬ ಪರಾರಿ

ಇಬ್ಬರು ಆರೋಪಿಗಳಾದ ಅರುಣ್, ಶ್ಯಾಮ್ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವಾಕ್ ಮಾಡುತ್ತಿದ್ದ ಸಂಜಯ್‌ ಕುಮಾರ್‌ನನ್ನು ನೋಡಿದ ಕೂಡಲೇ ಯುವತಿ ಕರೆ ಮಾಡಿ ತನ್ನ ಮೂವರು ಸ್ನೇಹಿತರನ್ನು ಕರೆಯಿಸಿದ್ದಾಳೆ. ಬೈಕ್‌ನಲ್ಲಿ ಬಂದ ಮೂವರು ಏಕಾಎಕಿ ಸಂಜಯ್‌ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಪೃಥ್ವಿಸಿಂಗ್ ಚಾಕು ಇರಿತ ಪ್ರಕರಣ; ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನಾನು ಬ್ಯೂಸಿಯಾಗಿರುವೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಸ್ವಿಪ್ಟ್ ಕಾರು

ಬೆಂಗಳೂರು: ಚಲಿಸುತ್ತಿದ್ದ ಸ್ವಿಪ್ಟ್​ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನೋಡ ನೋಡುತ್ತಿದ್ದಂತೆ  ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ – ಯಲಹಂಕ ರಸ್ತೆಯ ಮಾರಸಂದ್ರ ಬಳಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌರಿಬಿದನೂರು ಕಡೆಯಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕಾರು ಇದಾಗಿದ್ದು, ಇದ್ದಕ್ಕಿದಂತೆ ಕಾಣಿಸಿಕೊಂಡ ಬೆಂಕಿಯಿಂದ ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌ಗಳು ಬೆಂಕಿ ನಂದಿಸಿದ್ದಾರೆ. ಇನ್ನು ಈ ಘಟನೆ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 20 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ