Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ಜಮೀನು ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನೀಲಟೂರು ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಯುವಕನನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಪ್ರಸಾದ್ ರೆಡ್ಡಿ(22) ಮೃತ ಯುವಕ. ಪಕ್ಕದ ಜಮೀನಿನ ಕಿರಣ್ ರೆಡ್ಡಿ ಎಂಬಾತನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.

Kolar News: ಜಮೀನು ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಯುವಕನ ಹತ್ಯೆ
ಮೃತ ವ್ಯಕ್ತಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 24, 2023 | 12:44 PM

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ನೀಲಟೂರು ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಯುವಕನನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಪ್ರಸಾದ್ ರೆಡ್ಡಿ(22) ಮೃತ ಯುವಕ. ಪಕ್ಕದ ಜಮೀನಿನ ಕಿರಣ್ ರೆಡ್ಡಿ ಎಂಬಾತನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಹಲವು ವರ್ಷಗಳಿಂದ 2 ಕುಟುಂಬಗಳ‌ ಮಧ್ಯೆ ಜಮೀನು ವಿವಾದ ನಡೆಯುತ್ತಲಿದ್ದು, ಇದೇ ವಿಚಾರಕ್ಕೆ ಎರಡು ಕುಟುಂಬಗಳು ಕೋರ್ಟ್ ಮೆಟ್ಟಿಲೇರಿದ್ದವು. ಇಂದು(ಜೂ.24) ಮುಂಜಾನೆ ಮಾವಿನಕಾಯಿ ವಿಚಾರವಾಗಿ ಗಲಾಟೆ ನಡೆದಿದ್ದು, ಈ ವೇಳೆ ಕಿರಣ್​ಪ್ರಸಾದ್​ನಿಗೆ ಜಮೀನಿನ ಬಳಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಸಾದ್ ರೆಡ್ಡಿ ಕೊನೆಯುಸಿರೆಳದಿದ್ದಾನೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯಿಂದ ನಿರಂತರ ಕಿರುಕುಳ; ಬೇಸತ್ತು ಪತ್ನಿ ಆತ್ಮಹತ್ಯೆ

ದಾವಣಗೆರೆ: ಪತಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾಂತಮ್ಮ(30) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ತಾಲೂಕಿನ ಗೌರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೋಮಶೇಖರ್ ನಿತ್ಯ ಮದ್ಯಸೇವಿಸಿ ಬಂದು ಪತ್ನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂಸಿಸುತ್ತಿದ್ದ. ಇದರಿಂದ ಪತ್ನಿ ಮನನೊಂದು ನೇಣಿಗೆ ಶರಣಾಗಿದ್ದು, ತೀವ್ರ ಅಸ್ವಸ್ಥಗೊಂಡ ಮಹಿಳೆಯನ್ನ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆದಲ್ಲಿಯೇ ಶಾಂತಮ್ಮ ಸಾವನ್ನಪ್ಪಿದ್ದಾಳೆ. ಈ ಕುರಿತು ಆರೋಪಿ ಸೋಮಶೇಖರ್ ವಿರುದ್ಧ ಜಗಳೂರು ಠಾಣೆಗೆ ಮೃತ ಶಾಂತಮ್ಮ ತಂದೆ ರಾಮಪ್ಪ ಎಂಬುವವರು ದೂರು ನೀಡಿದ್ದಾರೆ.

ಇದನ್ನೂ ಓದಿ:ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಖದೀಮರು

ಮೈಸೂರು: ಜಿಲ್ಲೆಯ ಸರ್ದಾರ್ ವಲ್ಲಭಾಯಿ ಪಟೇಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಘಟನೆ‌ ನಡೆದಿದೆ. ಖದೀಮರು ಸ್ವಾಮಿ ಎಂಬುವವರಿಗೆ ಸೇರಿದ ಕಿಯಾ ಕಾರಿನ ಟೈರ್ ಕಳ್ಳತನ ಮಾಡಿ, ಕೆಳಗೆ ಕಲ್ಲು ಇಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು