AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ಆರು ವರ್ಷ ಕೋಮಾಕ್ಕೆ ಜಾರಿದ್ದ ಯುವಕ ಸಾವು

ಆಸ್ಪತ್ರೆ ವೈದ್ಯರ ಎಡವಟ್ಟಿನಿಂದಾಗಿ ಆರು ವರ್ಷಗಳ ಕಾಲ ಕೋಮಾಕ್ಕೆ ಜಾರಿದ್ದ ಯುವಕ ಇದೀಗ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ. ಏಪ್ರಿಲ್ 4, 2017 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ವಿಘ್ನೇಶ್, 2024ರ ಜನವರಿ 3 ರಂದು ಮೃತಪಟ್ಟಿದ್ದಾನೆ. ಚಿಕತ್ಸಾ ವೆಚ್ಚ ನೀಡುವುದಾಗಿ ಹೇಳಿ ಕೇವಲ ಐದು ಲಕ್ಷ ರೂಪಾಯಿ ನೀಡಿ ಕೈತೊಳೆದುಕೊಂಡ ವೈದ್ಯರ ವಿರುದ್ಧ ಮೃತ ಯುವಕನ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ಆರು ವರ್ಷ ಕೋಮಾಕ್ಕೆ ಜಾರಿದ್ದ ಯುವಕ ಸಾವು
ಬೆಂಗಳೂರಿನ ಖಾಸಗಿ ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ಆರು ವರ್ಷಗಳಿಂದ ಕೋಮಾದಲ್ಲಿದ್ದ ಯುವಕ ವಿಘ್ನೇಶ್ ಸಾವು
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Jan 12, 2024 | 9:15 AM

Share

ಬೆಂಗಳೂರು, ಜ.12: ಆಸ್ಪತ್ರೆ ವೈದ್ಯರ ಎಡವಟ್ಟಿನಿಂದಾಗಿ ಆರು ವರ್ಷಗಳ ಕಾಲ ಕೋಮಾಕ್ಕೆ ಜಾರಿದ್ದ ಯುವಕ ಇದೀಗ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ. ಏಪ್ರಿಲ್ 4 ,2017 ರಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ವಿಘ್ನೇಶ್ (20), 2024ರ ಜನವರಿ 3 ರಂದು ಮೃತಪಟ್ಟಿದ್ದಾನೆ. ಚಿಕತ್ಸಾ ವೆಚ್ಚ ನೀಡುವುದಾಗಿ ಹೇಳಿ ಕೇವಲ ಐದು ಲಕ್ಷ ರೂಪಾಯಿ ನೀಡಿ ಕೈತೊಳೆದುಕೊಂಡ ವೈದ್ಯರ ವಿರುದ್ಧ ಮೃತ ಯುವಕನ ಪೋಷಕರು ಬೆಂಗಳೂರು (Bengaluru) ನಗರದ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹರ್ನಿಯಾ ಚಿಕಿತ್ಸೆಗೆಂದು 2017ರ ಏಪ್ರಿಲ್ 4 ರಂದು ವಿಘ್ನೇಶ್​ನನ್ನು ಪೋಷಕರು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ವೈದ್ಯರು ಮೂರು ಬಾರಿ ಅನಸ್ತೇಷಿಯ ನೀಡಿದ್ದರು. ಇದರಿಂದಾಗಿ ಪ್ರಜ್ಞೆ ಕಳೆದುಕೊಂಡಿದ್ದ ವಿಘ್ನೇಶ್ ಕೋಮಾಕ್ಕೆ ಜಾರಿದ್ದನು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದರು.

ಇದನ್ನೂ ಓದಿ: ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು ಮುಂಗೈ ತೆಗೆದ ವೈದ್ಯರು, ಇನ್ನೂ ಜಡ್ಡುಗಟ್ಟಿರುವ ಬೆಸ್ಕಾಂ ಅಧಿಕಾರಿಗಳು

ಯುವಕನ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ಎಚ್ಚೆತ್ತ ವೈದ್ಯರು ಚಿಕಿತ್ಸೆ ವೆಚ್ಚ ಭರಿಸೋದಾಗಿ ಹೇಳಿದ್ದರು. ಚಿಕಿತ್ಸೆಗೆಂದು‌ 19 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಐದು ಲಕ್ಷ ನೀಡಿ ಕೈತೊಳೆದುಕೊಂಡಿದೆ. ಉಳಿದ ಚಿಕಿತ್ಸೆ ವೆಚ್ಚ ಕೂಡ ನೀಡದೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.

ಈ ನಡುವೆ ಆರು ವರ್ಷಗಳಿಂದ ಕೋಮಾದಲ್ಲಿದ್ದ ವಿಘ್ನೇಶ್ ಜನವರಿ 3 ರಂದು ಮೃತಪಟ್ಟಿದ್ದು, ಆಸ್ಪತ್ರೆ ವೈದ್ಯರ ಯಡವಟ್ಟು ಸಂಬಂಧ ಮತ್ತೆ ಬನಶಂಕರಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ