AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್, ಐಪಿಎಸ್ ಕನಸು ಕಂಡವ ಮಾಡಿದ್ದು ಉದ್ಯಮಿಯ ಕಿಡ್ನಾಪ್! ಇಬ್ಬರು ಅರೆಸ್ಟ್‌

ಈ ಯುವಕ ಐಎಎಸ್, ಐಪಿಎಸ್ ಆಗುವ ಕನಸು ಕಾಣುತ್ತಿದ್ದನು. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕೂಡ ನಡೆಸುತ್ತಿದ್ದನು. ದೊಡ್ಡ ಹುದ್ದೆಯ ಕನಸು ಕಂಡಿದ್ದ ಈತ ಮಾಡಿದ್ದು ಉದ್ಯಮಿಯ ಕಿಡ್ನಾಪ್. ಸದ್ಯ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಯುವಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಐಎಎಸ್, ಐಪಿಎಸ್ ಕನಸು ಕಂಡವ ಮಾಡಿದ್ದು ಉದ್ಯಮಿಯ ಕಿಡ್ನಾಪ್! ಇಬ್ಬರು ಅರೆಸ್ಟ್‌
ಉದ್ಯಮಿಯನ್ನು ಅಪಹರಣ ಮಾಡಿ ಬಂಧಿತರಾಗಿರುವ ಸಚಿನ್ ಮತ್ತು ಗೌರಿಶಂಕರ್
Follow us
Jagadisha B
| Updated By: Rakesh Nayak Manchi

Updated on: Jan 12, 2024 | 12:59 PM

ಬೆಂಗಳೂರು, ಜ.12: ಈ ಯುವಕ ಐಎಎಸ್, ಐಪಿಎಸ್ ಆಗುವ ಕನಸು ಕಾಣುತ್ತಿದ್ದನು. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಕೂಡ ನಡೆಸುತ್ತಿದ್ದನು. ದೊಡ್ಡ ಹುದ್ದೆಯ ಕನಸು ಕಂಡಿದ್ದ ಈತ ಮಾಡಿದ್ದು ಉದ್ಯಮಿಯ ಕಿಡ್ನಾಪ್. ಸದ್ಯ ಪ್ರಕರಣ ಸಂಬಂಧ ಬೆಂಗಳೂರು (Bengaluru) ಪೊಲೀಸರು ಯುವಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಸಚಿನ್, ಗೌರಿಶಂಕರ್​ ಬಂಧಿತ ಆರೋಪಿಗಳಾಗಿದ್ದು, ರಾಜಾಜಿನಗರದಲ್ಲಿ ಜನವರಿ 5 ರಂದು ನಡೆದಿದ್ದ ಅಪಹರಣ ಪ್ರಕರಣ ಇದಾಗಿದೆ. ಬಿಬಿಎ ಸೀಟ್ ಕೊಡಿಸಿದ್ದು ತಾನೇ ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟು ಉದ್ಯಮಿಯನ್ನೇ ಕಿಡ್ನಾಪ್ ಮಾಡಲಾಗಿತ್ತು.

ಏನಿದು ಪ್ರಕರಣ?

ಉದ್ಯಮಿ ಚೇತನ್ ಷಾ ತನ್ನ ಮಗಳಿಗೆ ಸೆಂಟ್ ಜೋಸೆಫ್ ಕಾಲೇಜಿನ ಬಿಬಿಎ ಸೀಟ್​ ಕೊಡಿಸಲು ಓಡಾಡುತಿದ್ದರು. ಈ ವೇಳೆ ಸಚಿನ್​ನನ್ನು ಸಂಪರ್ಕಿಸಿದ್ದಾರೆ. ಆದರೆ ಕಾಲೇಜಿನ ನಿಯಮದ ಪ್ರಕಾರವೇ ಚೇತನ್ ಮಗಳಿಗೆ ಸೀಟ್ ಸಿಕಿತ್ತು. ಆದರೇ ಆ ಸೀಟ್ ನನ್ನಿಂದಲೇ ಸಿಕ್ಕಿದೆ ಎಂದು ಸಚೀನ್ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ.

ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ಮಾಡಲು ಹಣ ಬೇಕೆಂದು ಕಿಡ್ನಾಪ್ ಮಾಡಿ ಕೊಲೆ; ಗೋವಾಗೆ ಹೋಗಿ ಮೋಜು-ಮಸ್ತಿ ಮಾಡಿದ್ದ ಆರೋಪಿಗಳು ಅರೆಸ್ಟ್

ಹಣ ಕೊಡಲು ಉದ್ಯಮಿ ಚೇತನ್ ಷಾ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಸಚಿನ್ ತನ್ನ ಸಹಪಾಟಿಗಳ ಜೊತೆಗೂಡಿ ಚೇತನ್ ಅಪಹರಣಕ್ಕೆ ಪ್ಲಾನ್ ಮಾಡಿದ್ದನು. ಅದರಂತೆ ಆಟೋದಲ್ಲಿ ಬಂದ ಆರೋಪಿಗಳು ಹಾಡ ಹಗಲೇ ಉದ್ಯಮಿ ಕಾರ್ ತಡೆದು ಅಪಹರಿಸಿದ್ದರು.

ಹಣ ಕೈ ಸೇರುವವರೆಗೂ ಆರೋಪಿಗಳು ಚೇತನ್​ ಇದ್ದ ಕಾರಿನಲ್ಲೇ ಬೆಂಗಳೂರು ಸುತ್ತಾಡಿದ್ದಾರೆ. ಚೇತನ್​ ಮನೆಗೆ ಒಬ್ಬನನ್ನು ಕಳುಹಿಸಿ 7 ಲಕ್ಷ ಹಣ ಪಡೆದ ನಂತರ ಕಾರಿನಿಂದ ಇಳಿದು ಆರೋಪಿಗಳು ಪರಾರಿಯಾಗಿದ್ದರು. ಇದಾದ ಬಳಿಕ ಚೇತನ್ ರಾಜಾಜಿನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಚಿನ್ ಹಾಗೂ ಗೌರಿಶಂಕರ್​ನನ್ನು ಬಂಧಿಸಿ 7 ಲಕ್ಷ ನಗದು ಹಾಗೂ ಮೊಬೈಲ್​​ಗಳನ್ನು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ