AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಇಂದಿನಿಂದ ಚರ್ಮ ಜೋಡಣೆ ಕಾರ್ಯ

ವೈದ್ಯರು ಬೆಳಗ್ಗೆ 9.30ಕ್ಕೆ ಆಪರೇಷನ್ ಥಿಯೇಟರ್ಗೆಗೆ ಕರೆದೊಯ್ದಿದ್ದಾರೆ. ಸದ್ಯ ಯುವತಿಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ. ಪರಾರಿಯಾಗಿರುವ ಆರೋಪಿ ನಾಗೇಶ್ಗಾಗಿ ಶೋಧಕಾರ್ಯ ಮುಂದುವರಿದಿದೆ.

ಸುಂಕದಕಟ್ಟೆಯಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಗೆ ಇಂದಿನಿಂದ ಚರ್ಮ ಜೋಡಣೆ ಕಾರ್ಯ
ಸಂತ್ರಸ್ತ ಯುವತಿ
TV9 Web
| Edited By: sandhya thejappa|

Updated on:May 02, 2022 | 12:47 PM

Share

ಬೆಂಗಳೂರು: ಸುಂಕದಕಟ್ಟೆಯಲ್ಲಿ ಆ್ಯಸಿಡ್ (Acid) ದಾಳಿಗೆ ಒಳಗಾಗಿದ್ದ ಸಂತ್ರಸ್ತೆಗೆ ಇಂದಿನಿಂದ (ಮೇ 2) ಚರ್ಮ ಜೋಡಣೆ ಕಾರ್ಯ ಆರಂಭವಾಗಿದೆ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಸಂತ್ರಸ್ತೆ ಯುವತಿಗೆ ಚಿಕಿತ್ಸೆ ಮುಂದುವರಿದಿದೆ. ನುರಿತ ವೈದ್ಯರ ತಂಡದಿಂದ ಸುಟ್ಟ ಭಾಗಕ್ಕೆ ಚರ್ಮ (Skin) ಜೋಡಣೆ ಮಾಡುತ್ತಿದ್ದಾರೆ. ವೈದ್ಯರು ಬೆಳಗ್ಗೆ 9.30ಕ್ಕೆ ಆಪರೇಷನ್ ಥಿಯೇಟರ್​ಗೆ ಕರೆದೊಯ್ದಿದ್ದಾರೆ. ಸದ್ಯ ಯುವತಿಯ ಸ್ಥಿತಿ ಸಹಜವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ. ಪರಾರಿಯಾಗಿರುವ ಆರೋಪಿ ನಾಗೇಶ್​ಗಾಗಿ ಶೋಧಕಾರ್ಯ ಮುಂದುವರಿದಿದೆ. ಐದು ಪ್ರತ್ಯೇಕ ತಂಡಗಳಿಂದ ಹುಡುಕಾಟ ನಡೆಯುತ್ತಿದೆ.

ನಾಗೇಶ್​ಗೆ ಕಠಿಣ ಶಿಕ್ಷೆ ಆಗಲೇಬೇಕೆಂದು ಯುವತಿ ಕುಟುಂಬಸ್ಥರು ಒತ್ತಾಯಿಸುತ್ತಿದ್ದಾರೆ. ಸಂತ್ರಸ್ತೆಯ ಚಿಕ್ಕಪ್ಪ ಸುಂದರೇಶ್​ ಎಂಬುವವರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಆ್ಯಸಿಡ್​ ಎರಚಿದ ತಪ್ಪಿಗೆ ಆತನಿಗೆ ತಕ್ಕ ಶಾಸ್ತಿಯಾಗಲೇಬೇಕು. ರಾಜ್ಯಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೇಲೆ ನಂಬಿಕೆ ಇದೆ ಅಂತ ಬೆಂಗಳೂರಿನಲ್ಲಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ಆರೋಪಿ ನಾಗೇಶ್​ಗೆ ಅತಿಯಾದ ದೈವ ಭಕ್ತಿ ಇತ್ತಂತೆ. ಹಣೆ ಮೇಲೆ ಯಾವಾಗಲು ಕೆಂಪು ಬಣ್ಣದ ತಿಲಕ ಇಟ್ಕೊತಿದ್ದನಂತೆ. ಪ್ರತಿ ದಿನ ತಪ್ಪದೇ ಸೂರ್ಯ ನಮಸ್ಕಾರ ಮಾಡುತ್ತಿದ್ದ. ಸೂರ್ಯ ನಮಸ್ಕಾರ ಮಾಡಿದ ಬಳಿಕವೇ ಕೆಲಸಕ್ಕೆ ತೆರಳುತ್ತಿದ್ದ. ತಾನಾಯ್ತು ತನ್ನ ಕೆಲಸ ಆಯ್ತು ಅಂತಾ ಇರುತ್ತಿದ್ದ. ಹೆಚ್ಚಿನ ಸ್ನೇಹ ಬಳಗ ಹೊಂದಿರಲಿಲ್ಲ. ಏರಿಯಾದಲ್ಲಿ‌ ಎದುರಿಗೆ ಸಿಕ್ಕವರ ಜೊತೆಗಷ್ಟೇ ಮಾತನಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

ಆರೋಪಿ ನಾಗೇಶ್ ಲಕ್ಷ ಲಕ್ಷ ಹಣದ ಜೊತೆಗೆ ಪರಾರಿಯಾಗಿದ್ದಾನೆ. ಗಾರ್ಮೆಂರ್ಟ್​ನಲ್ಲಿದ್ದ ವಸ್ತುಗಳನ್ನ ಮಾರಾಟ ಮಾಡಿದ್ದ. ಅದರಿಂದ ಬಂದ ಹಣವನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದ. ಅಷ್ಟು ಹಣದ ಜೊತೆಗೆ ಎಸ್ಕೇಪ್ ಆಗಿದ್ದಾನೆ.

ಬೇರೆ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆ: ತಮಿಳುನಾಡು ಅಥವಾ ಆಂಧ್ರದತ್ತ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ದೇವಸ್ಥಾನ, ಮಠಗಳಿಗೆ ಸೇರಿರುವ ಬಗ್ಗೆ ಅನುಮಾನ ಇದೆ. ಪ್ರತಿಯೊಂದು ಮಠ, ದೇವಸ್ಥಾನಗಳಲ್ಲಿ ಹುಡುಕಾಟ ನಡೆಯುತ್ತಿದೆ. ಪೊಲೀಸರು ಈಗಾಗಲೇ ಕರಪತ್ರಗಳನ್ನು ಸಿದ್ಧಪಡಿಸಿದ್ದಾರೆ. ಅದನ್ನು ನೆರೆ ರಾಜ್ಯಗಳಲ್ಲಿಯೂ ಹಂಚಲು ಸಿದ್ಧತೆ ಮಾಡಿದ್ದಾರೆ.

ಇದನ್ನೂ ಓದಿ

ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ

Video: ಗಾಳಿಗೆ ಸಿಲುಕಿದ ಸ್ಪೈಸ್​ಜೆಟ್​​​ ವಿಮಾನ ಅಲುಗಾಡಿದ ಭಯಾನಕ ದೃಶ್ಯ; ಚೆಲ್ಲಾಪಿಲ್ಲಿಯಾದ ವಸ್ತುಗಳು, ಪ್ರಯಾಣಿಕರು ಕಂಗಾಲು

Published On - 12:34 pm, Mon, 2 May 22

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ