AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಕೈಯೊಡ್ಡಿದ್ದ ಸಾರಿಗೆ ಅಧಿಕಾರಿಗಳು ಎಸಿಬಿ ಬಲೆಗೆ

ಕಲಬುರಗಿ: ಡಿಪೋ ಮ್ಯಾನೇಜರ್ ಬಳಿ ಲಂಚ ಸ್ವೀಕರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NEKRTC)ಯ ಇಬ್ಬರು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಆಳಂದ ಡಿಪೋ ಮ್ಯಾನೇಜರ್ ಈಶ್ವರ್ ಮೇಲಿನ ಕೇಸ್​ಗಳನ್ನ ಕ್ಯಾನ್ಸಲ್ ಮಾಡೋಕೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಇಂದು ನಗರದ ಕೇಂದ್ರ ಬಸ್​ ನಿಲ್ದಾಣದ ಕಚೇರಿಯಲ್ಲಿ ಈಶ್ವರ್ ಬಳಿ 50 ಸಾವಿರ ಹಣ ಪಡೆಯಲು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಎಸಿಬಿ ಎಸ್​ಪಿ ವಿ.ಎಂ.ಜ್ಯೋತಿ ನೇತೃತ್ವದಲ್ಲಿ ಅಧಿಕಾರಿಗಳು […]

ಲಂಚಕ್ಕೆ ಕೈಯೊಡ್ಡಿದ್ದ ಸಾರಿಗೆ ಅಧಿಕಾರಿಗಳು ಎಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on:Nov 05, 2019 | 6:53 PM

Share

ಕಲಬುರಗಿ: ಡಿಪೋ ಮ್ಯಾನೇಜರ್ ಬಳಿ ಲಂಚ ಸ್ವೀಕರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NEKRTC)ಯ ಇಬ್ಬರು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಆಳಂದ ಡಿಪೋ ಮ್ಯಾನೇಜರ್ ಈಶ್ವರ್ ಮೇಲಿನ ಕೇಸ್​ಗಳನ್ನ ಕ್ಯಾನ್ಸಲ್ ಮಾಡೋಕೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಇಂದು ನಗರದ ಕೇಂದ್ರ ಬಸ್​ ನಿಲ್ದಾಣದ ಕಚೇರಿಯಲ್ಲಿ ಈಶ್ವರ್ ಬಳಿ 50 ಸಾವಿರ ಹಣ ಪಡೆಯಲು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಎಸಿಬಿ ಎಸ್​ಪಿ ವಿ.ಎಂ.ಜ್ಯೋತಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ NEKRTC ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಡಿ.ಬಾವಿಕಟ್ಟಿ ಮತ್ತು ಸಂಚಾರಿ ನಿಯಂತ್ರಣಾಧಿಕಾರಿ ಜಯವಂತ್ ಎಂಬುವರು ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. 

ಪೆಟ್ಟಿ ಕೇಸ್​ ಕ್ಲಿಯರ್​ಗೆ 1 ಲಕ್ಷ ಡಿಮ್ಯಾಂಡ್:  ಈಶ್ವರ್ ಮೇಲೆ ಸುಮಾರು 22 ಪೆಟ್ಟಿ ಕೇಸ್​ಗಳಿದ್ದವು. ಈ ಕೇಸ್​ಗಳು ಕ್ಲಿಯರ್ ಆದ್ರೆ ಡಿಪೋ ಮ್ಯಾನೇಜರ್ ಈಶ್ವರ್​ಗೆ ಪ್ರಮೋಷನ್ ಸಿಗುತ್ತಿತ್ತು. ಹೀಗಾಗಿ ಸಂಚಾರಿ ನಿಯಂತ್ರಣಾಧಿಕಾರಿ ಜಯವಂತ್ ಮುಖಾಂತರ ಎಸ್​.ಡಿ.ಬಾವಿಕಟ್ಟಿ ಒಂದು ಲಕ್ಷ ರೂ.ಗೆ ಡಿಮ್ಯಾಂಡ್ ಮಾಡಿದ್ದಾರೆ. ಈ ಸಂಬಂಧ ಎಸಿಬಿ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 9:02 pm, Mon, 4 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ