AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚಕ್ಕೆ ಕೈಯೊಡ್ಡಿದ್ದ ಸಾರಿಗೆ ಅಧಿಕಾರಿಗಳು ಎಸಿಬಿ ಬಲೆಗೆ

ಕಲಬುರಗಿ: ಡಿಪೋ ಮ್ಯಾನೇಜರ್ ಬಳಿ ಲಂಚ ಸ್ವೀಕರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NEKRTC)ಯ ಇಬ್ಬರು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಆಳಂದ ಡಿಪೋ ಮ್ಯಾನೇಜರ್ ಈಶ್ವರ್ ಮೇಲಿನ ಕೇಸ್​ಗಳನ್ನ ಕ್ಯಾನ್ಸಲ್ ಮಾಡೋಕೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಇಂದು ನಗರದ ಕೇಂದ್ರ ಬಸ್​ ನಿಲ್ದಾಣದ ಕಚೇರಿಯಲ್ಲಿ ಈಶ್ವರ್ ಬಳಿ 50 ಸಾವಿರ ಹಣ ಪಡೆಯಲು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಎಸಿಬಿ ಎಸ್​ಪಿ ವಿ.ಎಂ.ಜ್ಯೋತಿ ನೇತೃತ್ವದಲ್ಲಿ ಅಧಿಕಾರಿಗಳು […]

ಲಂಚಕ್ಕೆ ಕೈಯೊಡ್ಡಿದ್ದ ಸಾರಿಗೆ ಅಧಿಕಾರಿಗಳು ಎಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on:Nov 05, 2019 | 6:53 PM

Share

ಕಲಬುರಗಿ: ಡಿಪೋ ಮ್ಯಾನೇಜರ್ ಬಳಿ ಲಂಚ ಸ್ವೀಕರಿಸುತ್ತಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NEKRTC)ಯ ಇಬ್ಬರು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಆಳಂದ ಡಿಪೋ ಮ್ಯಾನೇಜರ್ ಈಶ್ವರ್ ಮೇಲಿನ ಕೇಸ್​ಗಳನ್ನ ಕ್ಯಾನ್ಸಲ್ ಮಾಡೋಕೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಇಂದು ನಗರದ ಕೇಂದ್ರ ಬಸ್​ ನಿಲ್ದಾಣದ ಕಚೇರಿಯಲ್ಲಿ ಈಶ್ವರ್ ಬಳಿ 50 ಸಾವಿರ ಹಣ ಪಡೆಯಲು ಆರೋಪಿಗಳು ಮುಂದಾಗಿದ್ದರು. ಈ ವೇಳೆ ಎಸಿಬಿ ಎಸ್​ಪಿ ವಿ.ಎಂ.ಜ್ಯೋತಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ NEKRTC ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಡಿ.ಬಾವಿಕಟ್ಟಿ ಮತ್ತು ಸಂಚಾರಿ ನಿಯಂತ್ರಣಾಧಿಕಾರಿ ಜಯವಂತ್ ಎಂಬುವರು ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. 

ಪೆಟ್ಟಿ ಕೇಸ್​ ಕ್ಲಿಯರ್​ಗೆ 1 ಲಕ್ಷ ಡಿಮ್ಯಾಂಡ್:  ಈಶ್ವರ್ ಮೇಲೆ ಸುಮಾರು 22 ಪೆಟ್ಟಿ ಕೇಸ್​ಗಳಿದ್ದವು. ಈ ಕೇಸ್​ಗಳು ಕ್ಲಿಯರ್ ಆದ್ರೆ ಡಿಪೋ ಮ್ಯಾನೇಜರ್ ಈಶ್ವರ್​ಗೆ ಪ್ರಮೋಷನ್ ಸಿಗುತ್ತಿತ್ತು. ಹೀಗಾಗಿ ಸಂಚಾರಿ ನಿಯಂತ್ರಣಾಧಿಕಾರಿ ಜಯವಂತ್ ಮುಖಾಂತರ ಎಸ್​.ಡಿ.ಬಾವಿಕಟ್ಟಿ ಒಂದು ಲಕ್ಷ ರೂ.ಗೆ ಡಿಮ್ಯಾಂಡ್ ಮಾಡಿದ್ದಾರೆ. ಈ ಸಂಬಂಧ ಎಸಿಬಿ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published On - 9:02 pm, Mon, 4 November 19

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ