ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jun 22, 2020 | 3:25 PM

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us