AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ವಡೋದರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; 6 ಜನ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಅಪಘಾತದಿಂದ ಬಸ್​ ಸಂಪೂರ್ಣ ಜಖಂ ಆಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Accident: ವಡೋದರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; 6 ಜನ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ವಡೋದರಾದಲ್ಲಿ ಬಸ್ ಅಪಘಾತ
TV9 Web
| Edited By: |

Updated on:Oct 18, 2022 | 1:41 PM

Share

ವಡೋದರಾ: ಗುಜರಾತ್​ನ ವಡೋದರದ (Vadodara) ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಬಸ್ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಐಷಾರಾಮಿ ಬಸ್​ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ.

ಅಪಘಾತದಿಂದ ಬಸ್​ ಸಂಪೂರ್ಣ ಜಖಂ ಆಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಬಸ್ ರಾಜಸ್ಥಾನದ ಭಿಲ್ವಾರಾದಿಂದ ಮುಂಬೈಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಬಸ್​ ಚಾಲಕನ ವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದಾಗಿ ಅಪಘಾತಕ್ಕೀಡಾಗಿದೆ.

ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಿತಿ ಗಂಭೀರ

ಗೋಧಿ ತುಂಬಿದ್ದ ಟ್ರಕ್ ಅನ್ನು ಓವರ್​ಟೇಕ್ ಮಾಡಲು ಬಸ್ ಚಾಲಕ ಪ್ರಯತ್ನಿಸುತ್ತಿದ್ದಾಗ ಈ ಬಸ್ ಅಪಘಾತ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರು ಯಾರು? ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Tue, 18 October 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ