AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ

ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ದುರ್ಘಟನೆ ಉ.ಕ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ.

Crime News: ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ
ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ
TV9 Web
| Edited By: |

Updated on: May 02, 2022 | 3:58 PM

Share

ನೆಲಮಂಗಲ: ಬೈಕ್​ಗೆ ಟಿಪ್ಪರ್ ಡಿಕ್ಕಿ (Accident) ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ತ್ಯಾಮಗೊಂಡ್ಲು ಬಳಿಯ ಕೆರೆಕೋಡಿ ರಸ್ತೆಯಲ್ಲಿ ನಡೆದಿದೆ. ಜ್ಯೋತಿನಗರದ ಭಾಗ್ಯಮ್ಮ(48)ಮೃತ ದುರ್ದೈವಿ. ಇದೆ ತಿಂಗಳ 6ನೇ ತಾರೀಖಿನಂದು ಮಗನ ಮದುವೆ ನಿಶ್ಚಿಯವಾಗಿದ್ದು, ಲಗ್ನಪತ್ರಿಕೆ ಹಂಚಲು ಸಂಬಂಧಿಗಳ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮೃತ ಭಾಗ್ಯಮ್ಮ ಅವರ ತಂಗಿ ಗಂಡ ಗಿರೀಶ್ ಜೋತೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಬೈಕ್ ಸವಾರ ಗಿರೀಶ್​ಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲೇ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ:

ಮೈಸೂರು: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಆರೋಪಯನ್ನು ಜನರು ಕಂಬಕ್ಕೆ ಕಟ್ಟಿ ಹಾಕಿರುವಂತಹ ಘಟನೆ ಹುಣಸೂರು ತಾಲ್ಲೂಕಿನ ಗ್ರಾಮದಲ್ಲಿ ನಡೆದಿದೆ. ಆರೋಪಿ ಕಾಳನಾಯಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ, ಬಿಳಿಕೆರೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವು:

ಕಾರವಾರ: ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ದುರ್ಘಟನೆ ಉ.ಕ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಚಂದ್ರಶೇಖರ ಭೂಪಾಲ ನಾಯ್ಕ (72) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಅನುಮಾನಸ್ಪದ ಸಾವು:

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಓರ್ವ ಅನುಮಾನಸ್ಪದ ಸಾವನ್ನಪ್ಪಿರುವಂತಹ ಘಟನೆ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ನಡೆದಿದೆ. ಬೇಬಿ (28) ಮೃತ ದುರ್ದೈವಿ. ಬೇಬಿ ಮೂಲತಃ ನಂಜನಗೂಡು ಲಲಿತಾಪುರ ಗ್ರಾಮದವರಾಗಿದ್ದು, 8 ವರ್ಷದ ಹಿಂದೆ ಹಿಮ್ಮಾವು ಗ್ರಾಮದ ಉಮೇಶ್‌ ಜೊತೆ ಮದುವೆಯಾಗಿದ್ದರು. ಹಣಕ್ಕಾಗಿ ಪೀಡಿಸುತ್ತಿದ್ದ ಉಮೇಶ್ ಜಗಳ ಮಾಡಿ ಕೊಲೆ ಮಾಡಿರುವುದಾಗಿ ಮೃತ ಬೇಬಿ ಪೋಷಕರು ಆರೋಪಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು