Crime News: ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ

| Updated By: ಗಂಗಾಧರ​ ಬ. ಸಾಬೋಜಿ

Updated on: May 02, 2022 | 3:58 PM

ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ದುರ್ಘಟನೆ ಉ.ಕ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ.

Crime News: ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ
ಬೈಕ್​ಗೆ ಟಿಪ್ಪರ್ ಡಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಟಿಪ್ಪರ್​​ ಚಾಲಕ ಪರಾರಿ
Follow us on

ನೆಲಮಂಗಲ: ಬೈಕ್​ಗೆ ಟಿಪ್ಪರ್ ಡಿಕ್ಕಿ (Accident) ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ತ್ಯಾಮಗೊಂಡ್ಲು ಬಳಿಯ ಕೆರೆಕೋಡಿ ರಸ್ತೆಯಲ್ಲಿ ನಡೆದಿದೆ. ಜ್ಯೋತಿನಗರದ ಭಾಗ್ಯಮ್ಮ(48)ಮೃತ ದುರ್ದೈವಿ. ಇದೆ ತಿಂಗಳ 6ನೇ ತಾರೀಖಿನಂದು ಮಗನ ಮದುವೆ ನಿಶ್ಚಿಯವಾಗಿದ್ದು, ಲಗ್ನಪತ್ರಿಕೆ ಹಂಚಲು ಸಂಬಂಧಿಗಳ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮೃತ ಭಾಗ್ಯಮ್ಮ ಅವರ ತಂಗಿ ಗಂಡ ಗಿರೀಶ್ ಜೋತೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಬೈಕ್ ಸವಾರ ಗಿರೀಶ್​ಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲೇ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ:

ಮೈಸೂರು: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಆರೋಪಯನ್ನು ಜನರು ಕಂಬಕ್ಕೆ ಕಟ್ಟಿ ಹಾಕಿರುವಂತಹ ಘಟನೆ ಹುಣಸೂರು ತಾಲ್ಲೂಕಿನ ಗ್ರಾಮದಲ್ಲಿ ನಡೆದಿದೆ. ಆರೋಪಿ ಕಾಳನಾಯಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ, ಬಿಳಿಕೆರೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವು:

ಕಾರವಾರ: ಕಸ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ವೃದ್ಧ ಸಾವನ್ನಪ್ಪಿರುವಂತಹ ದುರ್ಘಟನೆ ಉ.ಕ ಜಿಲ್ಲೆಯ ಕುಮಟಾ ತಾಲೂಕಿನ ಅಳ್ವೆಕೋಡಿಯಲ್ಲಿ ನಡೆದಿದೆ. ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸುತ್ತಿರುವ ವೇಳೆ ಅವಘಡ ಸಂಭವಿಸಿದೆ. ಚಂದ್ರಶೇಖರ ಭೂಪಾಲ ನಾಯ್ಕ (72) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಅನುಮಾನಸ್ಪದ ಸಾವು:

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಓರ್ವ ಅನುಮಾನಸ್ಪದ ಸಾವನ್ನಪ್ಪಿರುವಂತಹ ಘಟನೆ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ನಡೆದಿದೆ. ಬೇಬಿ (28) ಮೃತ ದುರ್ದೈವಿ. ಬೇಬಿ ಮೂಲತಃ ನಂಜನಗೂಡು ಲಲಿತಾಪುರ ಗ್ರಾಮದವರಾಗಿದ್ದು, 8 ವರ್ಷದ ಹಿಂದೆ ಹಿಮ್ಮಾವು ಗ್ರಾಮದ ಉಮೇಶ್‌ ಜೊತೆ ಮದುವೆಯಾಗಿದ್ದರು. ಹಣಕ್ಕಾಗಿ ಪೀಡಿಸುತ್ತಿದ್ದ ಉಮೇಶ್ ಜಗಳ ಮಾಡಿ ಕೊಲೆ ಮಾಡಿರುವುದಾಗಿ ಮೃತ ಬೇಬಿ ಪೋಷಕರು ಆರೋಪಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.