AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ

ಕೆ.ಜಿ.ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಹತ್ಯೆಗೈದ ಪ್ರಮುಖ ಆರೋಪಿ ಮೊಹಮ್ಮದ್ ಸಾದ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Crime News: ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ
ರಾಯಚೂರು ಜಿಲ್ಲೆ ಸಿರವಾರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 16, 2022 | 2:59 PM

Share

ರಾಯಚೂರು: ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟರು. ಸಿರವಾರ ತಾಲೂಕಿನ ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ್ ಮಾಸಳಿ (40), ನರೇಶ್ (8) ಮೃತರು. ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಇವರು ತೆರಳುತ್ತಿದ್ದರು. ಬೈಕ್​ಗೆ ಡಿಕ್ಕಿಯಾದ ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪಕ್ಕದ ಜಮೀನಿಗೆ ನುಗ್ಗಿತು. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಅರ್ಬಾಜ್ ಹತ್ಯೆ: ಮೂವರ ಬಂಧನ ಆರೋಪಿ ಬಂಧನ

ಬೆಂಗಳೂರು: ಕೆ.ಜಿ.ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಹತ್ಯೆಗೈದ ಪ್ರಮುಖ ಆರೋಪಿ ಮೊಹಮ್ಮದ್ ಸಾದ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅರ್ಬಾಜ್ ಮತ್ತು ಅವನ ಸ್ನೇಹಿತರು ಮೊಹಮ್ಮದ್ ಸಾದ್​​ನನ್ನು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಗಸ್ಟ್ 12ರಂದು ಹತ್ಯೆ ಮಾಡಿದ್ದೆ ಎಂದು ಮೊಹಮದ್ ಸಾದ್ ತಪ್ಪೊಪ್ಪಿಕೊಂಡಿದ್ದ.

ಟಿಬೆಟಿಯನ್ ಕಾಲೊನಿಯಲ್ಲಿ ಗಾಂಜಾ ಪತ್ತೆ

ಕಾರವಾರ: ಮುಂಡಗೋಡ ತಾಲ್ಲೂಕಿನ ಟಿಬೆಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 7 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಮಗಲ್ ಚೋಟೇನ್ ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ: ಇಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಹಣಕಾಸಿನ ವಿಷಯದ ವಿವಾದ ವಿಕೋಪಕ್ಕೆ ಹೋಗಿ ಸನ್ಮೂನ್ ಕಬಾಡೆ ಎಂಬಾತನಿಗೆ ಅನಿಲ್ ಎಂಬಾತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:59 pm, Tue, 16 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್