AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ

ಕೆ.ಜಿ.ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಹತ್ಯೆಗೈದ ಪ್ರಮುಖ ಆರೋಪಿ ಮೊಹಮ್ಮದ್ ಸಾದ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Crime News: ಸಿರವಾರ- ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರು ಅಪಘಾತದಲ್ಲಿ ಸಾವು, ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ
ರಾಯಚೂರು ಜಿಲ್ಲೆ ಸಿರವಾರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ
TV9 Web
| Edited By: |

Updated on:Aug 16, 2022 | 2:59 PM

Share

ರಾಯಚೂರು: ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟರು. ಸಿರವಾರ ತಾಲೂಕಿನ ಕಲ್ಲೂರಿನ ಭೀಮವ್ವ ಮಾಸಳಿ (50), ಬಸವರಾಜ್ ಮಾಸಳಿ (40), ನರೇಶ್ (8) ಮೃತರು. ಸಂಬಂಧಿಯೊಬ್ಬರ ಅಂತ್ಯಕ್ರಿಯೆಗಾಗಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಇವರು ತೆರಳುತ್ತಿದ್ದರು. ಬೈಕ್​ಗೆ ಡಿಕ್ಕಿಯಾದ ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪಕ್ಕದ ಜಮೀನಿಗೆ ನುಗ್ಗಿತು. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಅರ್ಬಾಜ್ ಹತ್ಯೆ: ಮೂವರ ಬಂಧನ ಆರೋಪಿ ಬಂಧನ

ಬೆಂಗಳೂರು: ಕೆ.ಜಿ.ಹಳ್ಳಿಯಲ್ಲಿ ವಿದ್ಯಾರ್ಥಿ ಅರ್ಬಾಜ್ ಹತ್ಯೆಗೈದ ಪ್ರಮುಖ ಆರೋಪಿ ಮೊಹಮ್ಮದ್ ಸಾದ್ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ನಾಲ್ವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅರ್ಬಾಜ್ ಮತ್ತು ಅವನ ಸ್ನೇಹಿತರು ಮೊಹಮ್ಮದ್ ಸಾದ್​​ನನ್ನು ನಿಂದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಗಸ್ಟ್ 12ರಂದು ಹತ್ಯೆ ಮಾಡಿದ್ದೆ ಎಂದು ಮೊಹಮದ್ ಸಾದ್ ತಪ್ಪೊಪ್ಪಿಕೊಂಡಿದ್ದ.

ಟಿಬೆಟಿಯನ್ ಕಾಲೊನಿಯಲ್ಲಿ ಗಾಂಜಾ ಪತ್ತೆ

ಕಾರವಾರ: ಮುಂಡಗೋಡ ತಾಲ್ಲೂಕಿನ ಟಿಬೆಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 7 ಕೆಜಿ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಮಗಲ್ ಚೋಟೇನ್ ಎಂದು ಗುರುತಿಸಲಾಗಿದೆ.

ಹುಬ್ಬಳ್ಳಿ: ಇಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಹಣಕಾಸಿನ ವಿಷಯದ ವಿವಾದ ವಿಕೋಪಕ್ಕೆ ಹೋಗಿ ಸನ್ಮೂನ್ ಕಬಾಡೆ ಎಂಬಾತನಿಗೆ ಅನಿಲ್ ಎಂಬಾತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:59 pm, Tue, 16 August 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ