AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಸಾವು

ಗ್ಯಾಸ್​ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಮೇಲ್ಸೇತುವೆ ಬಳಿ ನಡೆದಿದೆ.

ಬೆಂಗಳೂರು: ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Oct 04, 2022 | 4:35 PM

Share

ಬೆಂಗಳೂರು: ಗ್ಯಾಸ್​ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೆಬ್ಬಾಳದ ಮೇಲ್ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ್ತಿ ಸಿ.ಆರ್.ಲತಾ (46) ಮಹಿಳೆ ಪತಿ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಲಾರಿ ಚಾಲಕ ಸಿದ್ದಿಕ್​ನನ್ನು ಆರ್.ಟಿ.ನಗರ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕನನ್ನ ಅಪಹರಸಿ, ಕೊಲೆ ಮಾಡಿದ ದುಷ್ಕರ್ಮಿಗಳು

ಕಲಬುರಗಿ: ದುಷ್ಕರ್ಮಿಗಳು ಯುವಕನನ್ನ ಅಪಹರಸಿ, ಕೊಲೆ ಮಾಡಿರುವ ಘಟನೆ ಕಲಬುರಗಿ ಪಟ್ಟಣದ ಶರಣಸಿರಸಗಿ ಮಡ್ಡಿ ಬಳಿ ನಡೆದಿದೆ. ಕಲಬುರಗಿ ನಗರದ ಆಶ್ರಯ ಕಾಲೋನಿ ನಿವಾಸಿ ಪ್ರವೀಣ್(21) ಮೃತ ದುರ್ದೈವಿ. ದುಷ್ಕರ್ಮಿಗಳು ಪ್ರವೀಣನನ್ನು ಕೈನಿಂದ ಗುದ್ದಿ ಕೊಲೆ ಮಾಡಿದ್ದಾನೆ. ಯುವತಿಯೋರ್ವಳನ್ನು ಚುಡಾಯಿಸಿದ್ದಕ್ಕೆ ಅಕ್ಟೋಬರ್ 2 ರಂದು ಮನೆ ಮುಂದೆ ಇದ್ದ ಪ್ರವೀಣ್​ನನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಆಶ್ರಯ ಕಾಲೋನಿಯ ಸಾಗರ್ ಮತ್ತು ಆತನ ಸ್ನೇಹಿತರ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘

ಚೇರ್ ಮೇಲೆ ಕುಳಿತಿದ್ದ ವ್ಯಕ್ತಿ ಕುಳಿತಲ್ಲೇ ಸಾವು

ಬೆಂಗಳೂರು: ಚೇರ್ ಮೇಲೆ ಕುಳಿತಿದ್ದ ವ್ಯಕ್ತಿ ಕುಳಿತಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಹೂಸ್ಕೂರು ರಸ್ತೆಯ ಹೋಟೆಲ್​ವೊಂದರಲ್ಲಿ ನಡೆದಿದೆ. ಬಾಬು(50)‌ ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ‌‌ ಪ್ರಕರಣ ದಾಖಲಾಗಿದೆ.

ಗೂಡ್ಸ್​ ವಾಹನ ಹಳ್ಳಕ್ಕೆ ಬಿದ್ದು ಓರ್ವ ಸಾವು

ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್​ ವಾಹನ ಹಳ್ಳಕ್ಕೆ ಬಿದ್ದು ಓರ್ವ ಸಾವನ್ನಪ್ಪಿದ್ದಾನೆ. ಮುರುಕನಹಳ್ಳಿ ಗ್ರಾಮದ ಸಚಿನ್(25) ಮೃತ ದುರ್ದೈವಿ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ