Accident: ರಾಜ್ಯದ ಹಲವೆಡೆ ಭೀಕರ ಅಪಘಾತ; ಪ್ರತ್ಯೇಕ ಘಟನೆಗಳಲ್ಲಿ 6 ಜನರ ಸಾವು

ದೇವನಹಳ್ಳಿ, ಚಿಕ್ಕಬಳ್ಳಾಪುರ, ತುಮಕೂರು, ಧಾರವಾಡ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭೀಕರ ರಸ್ತೆ ಅಪಘಾತಗಳು ಸಂಭವಿಸಿವೆ. ಪ್ರತ್ಯೇಕ ಘಟನೆಗಳಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Accident: ರಾಜ್ಯದ ಹಲವೆಡೆ ಭೀಕರ ಅಪಘಾತ; ಪ್ರತ್ಯೇಕ ಘಟನೆಗಳಲ್ಲಿ 6 ಜನರ ಸಾವು
ಪ್ರಾತಿನಿಧಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Sep 22, 2024 | 1:08 PM

ದೇವನಹಳ್ಳಿ, ಸೆ.22: ರಾಜ್ಯದ ಹಲವೆಡೆ ಇಂದು ಭೀಕರ ಅಪಘಾತಗಳು (Accident) ಸಂಭವಿಸಿದ್ದು ಪ್ರತ್ಯೇಕ ಘಟನೆಗಳಲ್ಲಿ 6 ಜನ ಮೃತಪಟ್ಟ (Death) ಘಟನೆ ನಡೆದಿದೆ. ಯೂ ಟರ್ನ್ ಪಡೆಯುವ ವೇಳೆ ಬೈಕ್​ಗೆ ಟ್ರಾಕ್ಟರ್ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವನಗುಂದಿ ಕ್ರಾಸ್ ಬಳಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತಾಲೂಕಿನ ಲಕ್ಕೊಂಡಹಳ್ಳಿ ಗ್ರಾಮದ ರಂಗಪ್ಪ (50) ಮತ್ತು ಸುಧಾ (45) ಮೃತ ದುರ್ದೈವಿಗಳು. ಅಪಘಾತದಲ್ಲಿ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ. ದಂಪತಿ ಮಾಲೂರು ಕಡೆಯಿಂದ ಹೊಸಕೋಟೆಯತ್ತ ಬರ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಅಪಘಾತದ ನಂತರ ಟ್ರಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದು ಸದ್ಯ ಚಾಲಕ ಭರತ್ ನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಚಿಕ್ಕಬಳ್ಳಾಪುರ ತಾಲೂಕಿನ ಸೇಟ್​ ದಿನ್ನೆ ಬಳಿ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಸುಮೋದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ಗೆ ಹಿಂಬದಿಯಿಂದ ಟ್ಯಾಂಕರ್​ ಡಿಕ್ಕಿಯಾಗಿ ಇಬ್ಬರು ಸಾವು

ಇನ್ನು ಮತ್ತೊಂದೆಡೆ ತುಮಕೂರು ತಾಲೂಕಿನ ತಿಮ್ಮರಾಜನಹಳ್ಳಿ ಬಳಿ ಬೈಕ್​ಗೆ ಹಿಂಬದಿಯಿಂದ ಟ್ಯಾಂಕರ್​ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬೈಕ್​ನಲ್ಲಿದ್ದ ತೇಜಸ್ವಿನಿ(32), ರಂಗನಾಥ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಿಮ್ಮರಾಜನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಶಿರಾ ಪಟ್ಟಣದಿಂದ ತುಮಕೂರು ಕಡೆಗೆ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು ಮಹಿಳೆ ಕೊಲೆಗೆ ಪರಸಂಗದ ಅನುಮಾನ? 50 ತುಂಡುಗಳನ್ನು ಜೋಡಿಸಿ ವರದಿ ಸಿದ್ಧ ಮಾಡುವಿದೇ ಸವಾಲು

ಬೈಕ್ ಮತ್ತು ಲಾರಿ ನಡುವೆ ಅಪಘಾತ, ದೃಶ್ಯ ಸೆರೆ

ಮಂಗಳೂರು ನಗರದ ಕೆ.ಪಿ.ಟಿ ಜಂಕ್ಷನ್​ನ ಪೆಟ್ರೋಲ್ ಪಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಅಶೋಕ್​ಗೆ ಗಂಭೀರ ಗಾಯಗಳಾಗಿವೆ. ಯೆಯ್ಯಾಡಿಯಿಂದ ಕೆ.ಪಿ.ಟಿ ಜಂಕ್ಷನ್​ನ ಸಪ್ತಗಿರಿ ಪೆಟ್ರೋಲ್ ಪಂಪ್ ಕಡೆ ಬೈಕ್ ಸವಾರ ಬರ್ತಿದ್ದ. ಅದೇ ವೇಳೆ ಪೆಟ್ರೋಲ್ ಪಂಪ್ ಕಡೆಗೆ ಗೂಡ್ಸ್ ಲಾರಿ ಬರ್ತಿತ್ತು. ಏಕಾಏಕಿ ಎಡಬದಿಗೆ ತಿರುಗಿಸಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಬೈಕ್ ಸವಾರನ ಸೊಂಟ ಹಾಗೂ ಬಲ ಕೈ ಮೇಲೆ ಲಾರಿಯ ಎದುರಿನ ಚಕ್ರ ಹರಿದಿದೆ. ಬೈಕ್ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ವಿಡಿಯೋ ಇಲ್ಲಿದೆ

ಜೆಸಿಬಿ ಮತ್ತು ಕ್ಯಾಂಟರ್ ಮಧ್ಯೆ ಅಪಘಾತ

ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ ಜೆಸಿಬಿ ಮತ್ತು ಕ್ಯಾಂಟರ್ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕ್ಯಾಂಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಲಕ ಜೀವ ಬಿಡುತ್ತಿದ್ದ ಲೈವ್ ವಿಡಿಯೋ ವೈರಲ್ ಆಗಿದೆ. ಧಾರವಾಡ ತಾಲೂಕಿನ ತಡಕೋಡ-ಖಾನಾಪುರ ಗ್ರಾಮದ ಈರಪ್ಪ ಜಿರೀಗವಾಡ ಮೃತ ವ್ಯಕ್ತಿ.

ಧಾರವಾಡದಿಂದ ತಡಕೋಡದತ್ತ ಕ್ಯಾಂಟರ್ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಈರಪ್ಪ ಜಿರೀಗವಾಡ ಚಾಲಕನ ಸೀಟ್​ನಲ್ಲಿ ಸಿಲುಕಿದ್ದು ಹೊರಗೆ ತೆಗೆಯಲಾಗದ ಸ್ಥಿತಿಯಲ್ಲಿದ್ದರು. ಸ್ಥಳೀಯರು ಬಾಯಿಗೆ ನೀರು ಹಾಕುತ್ತಿದ್ದಂತೆಯೇ ಜೀವ ಬಿಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ