ಖಾತೆಯಲ್ಲಿದ್ದ ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ. ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ […]

ಖಾತೆಯಲ್ಲಿದ್ದ  ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ
ಸಾಧು ಶ್ರೀನಾಥ್​

Updated on: Dec 02, 2019 | 4:15 PM

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ.

ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us