AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಕೊಲೆ; ವೈದ್ಯ ಅರೆಸ್ಟ್​​

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ.

ಬೆಳಗಾವಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಕೊಲೆ; ವೈದ್ಯ ಅರೆಸ್ಟ್​​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 13, 2023 | 9:59 AM

Share

ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ. ಉದ್ಯಮಿ ಫೆ.10ರಂದು ಗೋಕಾಕ್‌ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು.

ಹಾಗೇ ಪೊಲೀಸರು ಉದ್ಯಮಿ ರಾಜು ಝಂವರ್‌ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ರಾಜು ಝಂವರ್‌ ನಾಪತ್ತೆ ಬಳಿಕ ವೈದ್ಯ ಡಾ.ಸಚಿನ್ ಶಿರಗಾವಿ ಕೂಡ ರಾಜುಗೆ ದೂರವಾಣಿ ಕರೆ ಮಾಡಿದ್ದನು.

ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ. ತಾನು (ಡಾ.ಸಚಿನ್ ಶಿರಗಾವಿ) ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ. ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.

ಮಹಿಳೆಯರ ಸರ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಕಬ್ಬಾಳು ಚಂದು, ಕುಳ್ಳ ರಘು ಬಂಧಿತ ಆರೋಪಿಗಳು. ಬಂಧಿತರಿಂದ 6 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ, ಬೈಕ್​ನಲ್ಲಿ ಬಂದು ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು.

ಆರೋಪಿಗಳು ಇತ್ತೀಚೆಗೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ಪಾರಿಜಾತ ಹೂ ತರಲು ಹೋಗುತ್ತಿದ್ದ 71 ವರ್ಷದ ಆದಿಲಕ್ಷ್ಮಿ ಎಂಬ ವೃದ್ಧೆಯ ಸರ ಕಸಿದು ಪರಾರಿಯಾಗಿದ್ದರು. ಆರೋಪಿಗಳು ವೃದ್ಧೆಯನ್ನು ಮೊದಲು ಹೂ ಯಾವ ದೇವರಿಗೆ ಎಂದು ಆರೋಪಿ ಕಬ್ಬಾಳು ಚಂದು ಮಾತನಾಡಿಸಿದ್ದನು. ನಂತರ ಮತ್ತೊಬ್ಬ ಆರೋಪಿ ಬಂದು ಮಹಿಳೆ ಸರ ಕಸಿದು ಪರಾರಿಯಾಗಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸ್ಕಿಡ್​ ಆಗಿ ಬಿದ್ದು ಮಹಿಳೆ ದುರ್ಮರಣ

ಬೈಕ್ ಸ್ಕಿಡ್​ ಆಗಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸಿದ್ದ 35 ವರ್ಷದ ಮಹಿಳೆ‌ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆ ಇಂದು (ಫೆ.13) ಬೆಳಿಗ್ಗೆ 8.10ರ ಸುಮಾರಿಗೆ ಬೈಕ್​ನಲ್ಲಿ ಆಫೀಸ್​​ಗೆಂದು ಎಮ್​​ಜಿ ರಸ್ತೆ ಕಡೆ ಹೋಗುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ವಾಹನವೊಂದರ ಆಯಿಲ್ ಲೀಕಾಗಿದೆ. ಲೀಕಾದ ಆಯಿಲ್​ ಮೇಲೆ ಸ್ಪೀಡ್​​​ ಆಗಿ ಹೋದ ಪರಿಣಾಮ ಬೈಕ್​ ಸ್ಕಿಡ್​ ಆಗಿದೆ. ಘಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌