AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ತಜ್ಞೆಯ ಹೆಸರಲ್ಲಿ ನಕಲಿ ಫೇಸ್​​ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್

ನಕಲಿ ಫೇಸ್​​ ಬುಕ್ ಖಾತೆ ತೆರೆದು ಮಹಿಳೆಯರಿಗೆ ಅಶ್ಲೀಲ್​ ಭಾವಚಿತ್ರ ಕಳುಹಿಸುತ್ತಿದ್ದ ಆರೋಪಿಯ ಬಂಧನ

ಲೈಂಗಿಕ ತಜ್ಞೆಯ ಹೆಸರಲ್ಲಿ ನಕಲಿ ಫೇಸ್​​ ಬುಕ್ ಖಾತೆ ತೆರೆದು ಅಶ್ಲೀಲ ಫೋಟೋ ಕಳುಹಿಸುತ್ತಿದ್ದ ಆರೋಪಿ ಅರೆಸ್ಟ್
ಬಂಧಿತ ಆರೋಪಿ
TV9 Web
| Edited By: ವಿವೇಕ ಬಿರಾದಾರ|

Updated on:Oct 21, 2022 | 4:54 PM

Share

ಬೆಂಗಳೂರು: ಪ್ರಖ್ಯಾತ ಲೈಂಗಿಕ ತಜ್ಞೆ (Doctor) ಪದ್ಮಿನಿ ಪ್ರಸಾದ್ (Padmini Prasad) ಹೆಸರಲ್ಲಿ ನಕಲಿ ಫೇಸ್​​ ಬುಕ್ (Facebook) ಖಾತೆ ತೆರೆದು ಮಹಿಳೆಯರಿಗೆ ಅಶ್ಲೀಲ್​ ಭಾವಚಿತ್ರ (Photo) ಕಳುಹಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಜಗದೀಶ್ (32) ಬಂಧಿತ ಆರೋಪಿ. ಆರೋಪಿ ಜಗದೀಶ್ ದ್ವಿತೀಯ ಪಿಯುಸಿ ಓದಿ ವ್ಯವಸಾಯ ಮಾಡಿಕೊಂಡಿದ್ದನು. ಇವನು ಡಾ. ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್​​ ಬುಕ್ ಖಾತೆ ತೆರೆದು ಹಲವು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದನು. ಇದನ್ನು ತಿಳಿದ ಡಾ. ಪದ್ಮಿನಿ ಪ್ರಸಾದ್ ಉತ್ತರ ವಿಭಾಗ ಸಿಇಎನ್ ಪೋಲಿಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಡಾ. ಪದ್ಮಿನಿ ಪ್ರಸಾದ್ ದೂರಿನ ಹಿನ್ನೆಲೆ ಉತ್ತರ ವಿಭಾಗ ಸಿಇಎನ್ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿದ್ದವರಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ

ದಕ್ಷಿಣ ಕನ್ನಡ: ಸರಕಳುವಿಗೆ ಮುಂದಾಗಿ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಗಳಿಗೆ ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ದೋಲ್ಪಾಡಿಯಲ್ಲಿ ನಡೆದಿದೆ. ಪೊಳಲಿ ನಿವಾಸಿ ರಮೀಶುದ್ದೀನ್​​​, ರಫೀಕ್ ಎಂಬುವರ ಮೇಲೆ ಹಲ್ಲೆ ಮಾಡಲಾಗಿದೆ. ಆರೋಪಿಗಳು ಕಂಬಳಿ ಮಾರುವ ನೆಪದಲ್ಲಿ ಕಾರಿನಲ್ಲಿ ಬಂದಿದ್ದರು. ಕಂಬಳಿ ಮಾರುವ ನೆಪದಲ್ಲಿ ಆರೋಪಿಗಳು ಮಹಿಳೆಯೋರ್ವಳ ಮನೆಯಂಗಳಕ್ಕೆ ಬಂದು ಸರ ಕದಿಯಲು ಯತ್ನಿಸಿದ ಜೊತೆಗೆ, ಅತ್ಯಾಚಾರಕ್ಕೂ ಯತ್ನಿಸಿದ್ದಾರೆ.

ಈ ವೇಳೆ ಮಹಿಳೆ ಕಿರುಚಾಡಿದ್ದು, ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ, ಕಾರು ಪಲ್ಟಿಯಾಗಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಪಲ್ಟಿಯಾದ ಕಾರಿನಿಂದ ಆರೋಪಿಗಳನ್ನು ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆರೋಪಿಗಳನ್ನು ಹಿಡಿದು ಥಳಿಸಿದ ವಿಡಿಯೋ ವೈರಲ್​​ ಆಗಿದೆ. ಮಹಿಳೆ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ.

ಲವ್ ಜಿಹಾದ್ ಆರೋಪಿಸಿ ಯುವಕನಿಗೆ ಹಿಂದೂ ಕಾರ್ಯಕರ್ತರಿಂದ ಥಳಿತ: ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಿಂದೂ ಕಾರ್ಯಕರ್ತರು ಥಳಿಸಿದ್ದಾರೆ. ಮುಲ್ಕಿಯ ತೋಕೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಸಮೀರ್ ಎಂಬಾತನಿಗೆ ಥಳಿಸಿದ್ದಾರೆ. ಸಮೀರ್ ವಿವಾಹಿತನಾಗಿದ್ದರೂ ಮತ್ತೊಬ್ಬ ಹಿಂದೂ ಯುವತಿ ಜೊತೆ ವಾಸವಾಗಿದ್ದನು.

ಹಿಂದೂ ಕಾರ್ಯಕರ್ತರು ಸಮೀರ್​ನನ್ನು ಅಡ್ಡ ಹಾಕಿ ವಿಚಾರಿಸಿದಾಗ ಆರೋಪಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ನೆಲೆಸಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ. ಆಗ ಕಾರ್ಯಕರ್ತರು ಥಳಿಸಿದ್ದಾರೆ. ಹಿಂದೂ ಕಾರ್ಯಕರ್ತರು ಕೂಡಲೇ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ಪೊಲೀಸ್​​ರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Fri, 21 October 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್