AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಣೆಗೆ ಕರೆತರುತ್ತಿದ್ದಾಗ ಆರೋಪಿಯಿಂದ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿತ

ಆರೋಪಿ ರೌಡಿ ಆಸಾಮಿಯನ್ನು ಠಾಣೆಗೆ ಕರೆತರಲು ಹೋಗಿದ್ದಾಗ ಆರೋಪಿ ಮಹಿಳಾ ಹೆಡ್​ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್​​ನಿಂದ ಇರಿದಿದ್ದಾನೆ.

ಠಾಣೆಗೆ ಕರೆತರುತ್ತಿದ್ದಾಗ ಆರೋಪಿಯಿಂದ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 17, 2022 | 8:25 AM

Share

ಬೆಂಗಳೂರು: ಆರೋಪಿ (Accused) ರೌಡಿ ಆಸಾಮಿಯನ್ನು ಠಾಣೆಗೆ ಕರೆತರಲು ಹೋಗಿದ್ದಾಗ ಆರೋಪಿ ಮಹಿಳಾ ಹೆಡ್​ ಕಾನ್ಸ್​ಟೇಬಲ್​ಗೆ (Police Head Constable) ಡ್ರ್ಯಾಗರ್​​ನಿಂದ ಇರಿದಿದ್ದಾನೆ.  ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್ ಹೆಡ್​ಕಾನ್ಸ್​ಟೇಬಲ್. ಆರೋಪಿ ರೌಡಿ ಆಸಾಮಿ ಶೇಕ್ ಶರೀಫ್ ಶರೀಫ್ (25) ನಿಂದ ಕೃತ್ಯ ನಡೆದಿದೆ. ಆರೋಪಿ ಮೇಲೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ಎಚ್ ಎ ಎಲ್ ಠಾಣೆಯಲ್ಲಿ ದಾಖಲಾಗಿದ್ದವು.

ಆರೋಪಿ ಇತ್ತೀಚೆಗರ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದಿದ್ದನು. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಅಲ್ಲದೇ ಮತ್ತೆ ಕೊಲೆ ಮಾಡಲು ಸಂಚು ರೂಪಿಸಿರೋದಾಗಿ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನಲೆ ಆತನನ್ನು ಠಾಣೆಗೆ ಕರೆತರಲು ಆಗಸ್ಟ್ 5 ರಂದು ಮಹಿಳಾ ಹೆಡ್​ ಕಾನ್ಸ್​ಟೇಬಲ್ ವಿನುತಾ ಮತ್ತು ತಂಡ ಹೋಗಿತ್ತು.

ಪೊಲೀಸರಿಗೆ ಆರೋಪಿ ಜ್ಯೋತಿನಗರದಿಂದ ರೆಡ್ಡಿ ಪಾಳ್ಯಕ್ಕೆ ತೆರಳ್ತಿರುವ ಬಗ್ಗೆ  ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ರಾತ್ರಿ 9.30 ಕ್ಕೆ ಆತನನ್ನು ಕರೆದುಕೊಂಡು ಹೋಗಲು ತಂಡ ಮುಂದಾಗಿದೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಡ್ರ್ಯಾಗರ್ ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ಸ್ಥಳೀಯರ ಸಹಾಯದಿಂದ ಆತನ್ನನ್ನು ಹಿಡಿದು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.

ಗಾಯಾಳು ಮಹಿಳಾ ಹೆಡ್​ ಕಾನ್ಸ್​ಟೇಬಲ್​ ಜೀವಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಘಟನೆ ಸಂಬಂದ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ಅಂತಾರಾಜ್ಯ ಕಳ್ಳರನ್ನ ಬಂಧಿಸಿ ಹುಬ್ಬಳ್ಳಿ ಪೊಲೀಸ್​

ಹುಬ್ಬಳ್ಳಿ: ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ವೇಲೊರು ಗ್ರಾಮದ ರಕ್ಷಿತ, ಪಾವಗಡ ನಿವಾಸಿ ನಿತಿನ್, ಹೊಸಪೇಟೆ ನಿವಾಸಿಗಳಾದ ಮಂಜು ಅಲಿಯಾಸ್​ ಡಾಲಿ ಹಾಗೂ ಅರುಣ ಬಂಧಿತ ಆರೋಪಿಗಳು.  10ಕ್ಕೂ ಹೆಚ್ಚು ಅಂಗಡಿಗಳ ಶೆಟರ್ಸ್​ ಮುರಿದು ನಗದು ದೋಚಿದ್ದರು. ಈ ಚಾಲಾಕಿ ಕಳ್ಳರು ಹುಬ್ಬಳ್ಳಿ ಅಲ್ಲದೇ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಠಾಣೆಗೆ ಬೇಕಾದವರು‌.

Published On - 8:19 am, Wed, 17 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ